23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

ವೇಣೂರು: ವೇಣೂರು ಕೆಥೋಲಿಕ್‌ ಬ್ಯಾಂಕ್‌ ಲೋನ್‌ ಕಟ್ಟುವ ಸಲುವಾಗಿ ಅಡಿಕೆ ಮಾರಾಟ ಮಾಡಿ ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣವು ಕಳವುವಾಗಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಫೆ.5 ರಂದು ದೂರು ದಾಖಲಾಗಿದೆ.

ಘಟನೆ ವಿವರ: ಪೆರ್ಮುಡ ನಿವಾಸಿ ಪ್ರಭಾಕರ ರವರು ವೇಣೂರು ಕೆಥೋಲಿಕ್‌ ಬ್ಯಾಂಕ್‌ ಲೋನ್‌ ಕಟ್ಟುವ ಸಲುವಾಗಿ ಅಡಿಕೆ ಮಾರಾಟ ಮಾಡಿ ಬಂದ ರೂ 2.25 ಲಕ್ಷ ನಗದು ಹಣವನ್ನು ತನ್ನ ಮನೆಯಾದ ನಿಟ್ಟಡೆ ಗ್ರಾಮದ ಪೆರ್ಮುಡ ಉದಯಸದನ ಮನೆ ಎಂಬಲ್ಲಿ ಬೆಡ್‌ ರೂಮ್‌ ಒಂದರ ಸೆಲ್ಫ್‌ ನಲ್ಲಿ ಚಾಪೆ ಅಡಿಯಲ್ಲಿ ಇಟ್ಟಿದ್ದರು.ಸದ್ರಿ ಹಣವನ್ನು ಪ್ರಭಾಕರ ರವರು ಫೆ.03 ರಂದು ಬೆಳಿಗ್ಗೆ ನೋಡಿದ್ದರು. ಆದರೆ ಅದೇ ದಿನ ಸಂಜೆ ನೋಡಿದಾಗ ಹಣವು ಕಾಣೆಯಾಗಿರುತ್ತದೆ.


ಪ್ರಭಾಕರ ಅಡಿಕೆ ಮಾರಾಟ ಮಾಡಿರುವ ವಿಚಾರ ನೆರೆಮನೆಯ ವಿಜಯ ಮೋನಿಸ್‌ ಎಂಬಾತನಿಗೆ ತಿಳಿದಿರುತ್ತದೆ. ಫೆ. 03 ರಂದು ವಿಜಯ ಮೋನಿಸ್‌ ಪ್ರಭಾಕರ ರವರ ಮನೆಗೆ ಬಂದು ಹೋಗಿದ್ದರು.
ಪ್ರಭಾಕರ ರವರು ಕಾಣೆಯಾದ ಹಣದ ಬಗ್ಗೆ ಮನೆಯಲ್ಲಿ ಹುಡುಕಾಡಿ ಮನೆಗೆ ಬಂದಿದ್ದ ವಿಜಯ ಮೋನಿಸ್‌ ನನ್ನು ವಿಚಾರಿಸಿ ಹಣ ಪತ್ತೆಯಾಗದೇ ಇರುವುದರಿಂದ ಇದೀಗ ವೇಣೂರು ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಕಾಣೆಯಾದ ಹಣವನ್ನು ವಿಜಯ ಮೋನಿಸ್‌ ಎಂಬಾತನೇ ತೆಗೆದಿರಬಹುದು ಎಂಬ ಬಗ್ಗೆ ಬಲವಾದ ಸಂಶಯ ವ್ಯಕ್ತಪಡಿಸಿದ್ದಾರೆ . ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2025

Suddi Udaya

ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದಾಗಿ ಬೆಂಕಿ ಅವಘಡ ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ರೆಖ್ಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ವಾಸ್ತು ಬಲಿ ಹೋಮ, ದುರ್ಗಾನಮಸ್ಕಾರ ಪೂಜೆ

Suddi Udaya
error: Content is protected !!