29.2 C
ಪುತ್ತೂರು, ಬೆಳ್ತಂಗಡಿ
April 19, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

ಸಾವ್ಯ : ಇಲ್ಲಿಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವನ್ನು ಕೇರಳ ಮೂಲದ ವ್ಯಕ್ತಿಯು ಮಾಂಸಕ್ಕಾಗಿ ಅಥವಾ ಇನ್ನಾವುದೋ ಉದ್ದೇಶದಿಂದ ಹತ್ಯೆ ಮಾಡಿ ದನದ ಅವಶೇಷಗಳು ಹೂತು ಹಾಕಿದ ಬಗ್ಗೆ ಫೆ.4 ರಂದು ವೇಣೂರು ಠಾಣೆಯಲ್ಲಿ ದೂರು ದಾಖಲಾಗಿದೆ.

ಘಟನೆ ವಿವರ: ಫೆ.05 ರಂದು ಸಾವ್ಯ ಗ್ರಾಮದ ನೂಜಿಲೋಡಿ ಎಂಬಲ್ಲಿ ಆಗ್ನೇಶ್ ಎಂಬವರ ದೂರಿನಂತೆ ನೆರೆ-ಮನೆಯ ವಿಜಯ ಹೆಗ್ಡೆ ಎಂಬವರ ಮನೆಯ ಅಂಗಳದಲ್ಲಿ ನಾಯಿಯೊಂದು ನದಿಬದಿಯಿಂದ ದನದಂತೆ ಕಾಣುವ ಯಾವುದೋ ಪ್ರಾಣಿಯ ಕಾಲನ್ನು ಬಾಯಿಯಲ್ಲಿ ಕಚ್ಚಿ ಎಳೆದುಕೊಂಡು ಬರುತ್ತಿದ್ದುದನ್ನು ಆಗ್ನೇಶ್ ತಂದೆ ಅಮ್ಮಿ ಪೂಜಾರಿ ಎಂಬವರು ನೋಡಿ ವಿಜಯ ಹೆಗ್ಡೆಯರಿಗೆ ಮಾಹಿತಿ ತಿಳಿಸಿ ಬಳಿಕ ವಿಜಯ ಹೆಗ್ಡೆಯವರೊಂದಿಗೆ ನದಿ ಬದಿಗೆ ತೆರಳಿ ನೋಡಲಾಗಿ ಪ್ರಾಣಿಯ ಅವಶೇಷಗಳನ್ನು ಮಣ್ಣಿನಲ್ಲಿ ಹೂತು ಹಾಕಿದ್ದುದನ್ನು ಯಾವುದೋ ಪ್ರಾಣಿಗಳು ಕೆಡವಿರುವಂತೆ ಕಂಡುಬರುತ್ತಿದ್ದು, ನೂಜಿಲೋಡಿ ಮನೆಯಲ್ಲಿ ವಾಸವಿದ್ದ ಕೇರಳ ಮೂಲದ ವ್ಯಕ್ತಿಯ ಬಾಬ್ತು ಗಂಡು ಕರುವು ಈ ದಿನ ತೋಟದಲ್ಲಿ ಕಾಣಿಸದೇ ಇರುವುದರಿಂದ ಸದ್ರಿ ಜಾನುವಾರನ್ನು ಫೆ.04 ರಂದು ಕೇರಳ ಮೂಲದ ವ್ಯಕ್ತಿಯು ಮಾಂಸಕ್ಕಾಗಿ ಅಥವಾ ಇನ್ನಾವುದೋ ಉದ್ದೇಶದಿಂದ ಹತ್ಯೆ ಮಾಡಿ ಅವಶೇಷಗಳನ್ನು ನದಿ ಬದಿಯಲ್ಲಿ ಮಣ್ಣಿನಲ್ಲಿ ಹೂತುಹಾಕಿರುವ ಬಗ್ಗೆ ಶಂಕಿಸಲಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭುರವರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಶುದ್ಧೀಕರಣಕ್ಕೆ ಹೊಸ ಎಥಿಲೀನ್ ಆಕ್ಸೈಡ್ ಯಂತ್ರ ಅಳವಡಿಕೆ

Suddi Udaya

ನಿಡ್ಲೆ ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ ಹಾಗೂ ಹಣ್ಣು ಹಂಪಲು ಸಸಿಗಳ ವಿತರಣೆ

Suddi Udaya

ಶ್ರದ್ಧಾಕೇಂದ್ರಗಳಲ್ಲಿ “ದೇವವೃಕ್ಷ” ನೆಡುವ ಅಭಿಯಾನಕ್ಕೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಪಬ್ಲಿಕ್ ಪರೀಕ್ಷೆ : ಉಣ್ಣಾಲು , ಕೊಯ್ಯೂರು ಸಿರಾಜುಲ್ ಹುದಾ ಅರೇಬಿಕ್ ಸ್ಕೂಲ್ ವಿದ್ಯಾರ್ಥಿ ನೂರುನ್ನಿಸಾ ರಾಷ್ಟ್ರ ಮಟ್ಟದಲ್ಲಿ ಪ್ರಥಮ ರ್‍ಯಾಂಕ್: ಉಣ್ಣಾಲು ಕೊಯ್ಯೂರು ಮದರಸಕ್ಕೆ ಶೇಕಡಾ 100 ಫಲಿತಾಂಶ

Suddi Udaya

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

Suddi Udaya
error: Content is protected !!