24.4 C
ಪುತ್ತೂರು, ಬೆಳ್ತಂಗಡಿ
June 7, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

ಸಾವ್ಯ : ಇಲ್ಲಿಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವನ್ನು ಕೇರಳ ಮೂಲದ ವ್ಯಕ್ತಿಯು ಮಾಂಸಕ್ಕಾಗಿ ಅಥವಾ ಇನ್ನಾವುದೋ ಉದ್ದೇಶದಿಂದ ಹತ್ಯೆ ಮಾಡಿ ದನದ ಅವಶೇಷಗಳು ಹೂತು ಹಾಕಿದ ಬಗ್ಗೆ ಫೆ.4 ರಂದು ವೇಣೂರು ಠಾಣೆಯಲ್ಲಿ ದೂರು ದಾಖಲಾಗಿದೆ.

ಘಟನೆ ವಿವರ: ಫೆ.05 ರಂದು ಸಾವ್ಯ ಗ್ರಾಮದ ನೂಜಿಲೋಡಿ ಎಂಬಲ್ಲಿ ಆಗ್ನೇಶ್ ಎಂಬವರ ದೂರಿನಂತೆ ನೆರೆ-ಮನೆಯ ವಿಜಯ ಹೆಗ್ಡೆ ಎಂಬವರ ಮನೆಯ ಅಂಗಳದಲ್ಲಿ ನಾಯಿಯೊಂದು ನದಿಬದಿಯಿಂದ ದನದಂತೆ ಕಾಣುವ ಯಾವುದೋ ಪ್ರಾಣಿಯ ಕಾಲನ್ನು ಬಾಯಿಯಲ್ಲಿ ಕಚ್ಚಿ ಎಳೆದುಕೊಂಡು ಬರುತ್ತಿದ್ದುದನ್ನು ಆಗ್ನೇಶ್ ತಂದೆ ಅಮ್ಮಿ ಪೂಜಾರಿ ಎಂಬವರು ನೋಡಿ ವಿಜಯ ಹೆಗ್ಡೆಯರಿಗೆ ಮಾಹಿತಿ ತಿಳಿಸಿ ಬಳಿಕ ವಿಜಯ ಹೆಗ್ಡೆಯವರೊಂದಿಗೆ ನದಿ ಬದಿಗೆ ತೆರಳಿ ನೋಡಲಾಗಿ ಪ್ರಾಣಿಯ ಅವಶೇಷಗಳನ್ನು ಮಣ್ಣಿನಲ್ಲಿ ಹೂತು ಹಾಕಿದ್ದುದನ್ನು ಯಾವುದೋ ಪ್ರಾಣಿಗಳು ಕೆಡವಿರುವಂತೆ ಕಂಡುಬರುತ್ತಿದ್ದು, ನೂಜಿಲೋಡಿ ಮನೆಯಲ್ಲಿ ವಾಸವಿದ್ದ ಕೇರಳ ಮೂಲದ ವ್ಯಕ್ತಿಯ ಬಾಬ್ತು ಗಂಡು ಕರುವು ಈ ದಿನ ತೋಟದಲ್ಲಿ ಕಾಣಿಸದೇ ಇರುವುದರಿಂದ ಸದ್ರಿ ಜಾನುವಾರನ್ನು ಫೆ.04 ರಂದು ಕೇರಳ ಮೂಲದ ವ್ಯಕ್ತಿಯು ಮಾಂಸಕ್ಕಾಗಿ ಅಥವಾ ಇನ್ನಾವುದೋ ಉದ್ದೇಶದಿಂದ ಹತ್ಯೆ ಮಾಡಿ ಅವಶೇಷಗಳನ್ನು ನದಿ ಬದಿಯಲ್ಲಿ ಮಣ್ಣಿನಲ್ಲಿ ಹೂತುಹಾಕಿರುವ ಬಗ್ಗೆ ಶಂಕಿಸಲಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸೆ.7: ಬಳಂಜ-ನಾಲ್ಕೂರು- ತೆಂಕಕಾರಂದೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya

ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆ

Suddi Udaya

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಅಳದಂಗಡಿ 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಎ.26: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಅಭ್ಯರ್ಥಿಗಳ ನಡುವೆ ಸ್ಪರ್ಧೆ

Suddi Udaya
error: Content is protected !!