July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

ಸಾವ್ಯ : ಇಲ್ಲಿಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವನ್ನು ಕೇರಳ ಮೂಲದ ವ್ಯಕ್ತಿಯು ಮಾಂಸಕ್ಕಾಗಿ ಅಥವಾ ಇನ್ನಾವುದೋ ಉದ್ದೇಶದಿಂದ ಹತ್ಯೆ ಮಾಡಿ ದನದ ಅವಶೇಷಗಳು ಹೂತು ಹಾಕಿದ ಬಗ್ಗೆ ಫೆ.4 ರಂದು ವೇಣೂರು ಠಾಣೆಯಲ್ಲಿ ದೂರು ದಾಖಲಾಗಿದೆ.

ಘಟನೆ ವಿವರ: ಫೆ.05 ರಂದು ಸಾವ್ಯ ಗ್ರಾಮದ ನೂಜಿಲೋಡಿ ಎಂಬಲ್ಲಿ ಆಗ್ನೇಶ್ ಎಂಬವರ ದೂರಿನಂತೆ ನೆರೆ-ಮನೆಯ ವಿಜಯ ಹೆಗ್ಡೆ ಎಂಬವರ ಮನೆಯ ಅಂಗಳದಲ್ಲಿ ನಾಯಿಯೊಂದು ನದಿಬದಿಯಿಂದ ದನದಂತೆ ಕಾಣುವ ಯಾವುದೋ ಪ್ರಾಣಿಯ ಕಾಲನ್ನು ಬಾಯಿಯಲ್ಲಿ ಕಚ್ಚಿ ಎಳೆದುಕೊಂಡು ಬರುತ್ತಿದ್ದುದನ್ನು ಆಗ್ನೇಶ್ ತಂದೆ ಅಮ್ಮಿ ಪೂಜಾರಿ ಎಂಬವರು ನೋಡಿ ವಿಜಯ ಹೆಗ್ಡೆಯರಿಗೆ ಮಾಹಿತಿ ತಿಳಿಸಿ ಬಳಿಕ ವಿಜಯ ಹೆಗ್ಡೆಯವರೊಂದಿಗೆ ನದಿ ಬದಿಗೆ ತೆರಳಿ ನೋಡಲಾಗಿ ಪ್ರಾಣಿಯ ಅವಶೇಷಗಳನ್ನು ಮಣ್ಣಿನಲ್ಲಿ ಹೂತು ಹಾಕಿದ್ದುದನ್ನು ಯಾವುದೋ ಪ್ರಾಣಿಗಳು ಕೆಡವಿರುವಂತೆ ಕಂಡುಬರುತ್ತಿದ್ದು, ನೂಜಿಲೋಡಿ ಮನೆಯಲ್ಲಿ ವಾಸವಿದ್ದ ಕೇರಳ ಮೂಲದ ವ್ಯಕ್ತಿಯ ಬಾಬ್ತು ಗಂಡು ಕರುವು ಈ ದಿನ ತೋಟದಲ್ಲಿ ಕಾಣಿಸದೇ ಇರುವುದರಿಂದ ಸದ್ರಿ ಜಾನುವಾರನ್ನು ಫೆ.04 ರಂದು ಕೇರಳ ಮೂಲದ ವ್ಯಕ್ತಿಯು ಮಾಂಸಕ್ಕಾಗಿ ಅಥವಾ ಇನ್ನಾವುದೋ ಉದ್ದೇಶದಿಂದ ಹತ್ಯೆ ಮಾಡಿ ಅವಶೇಷಗಳನ್ನು ನದಿ ಬದಿಯಲ್ಲಿ ಮಣ್ಣಿನಲ್ಲಿ ಹೂತುಹಾಕಿರುವ ಬಗ್ಗೆ ಶಂಕಿಸಲಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಜಿರೆ: ಹಳೆಪೇಟೆ ನಿವಾಸಿ ಜಿ. ವಿಠಲದಾಸ್ ಪ್ರಭು ನಿಧನ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

Suddi Udaya

ಸವಿ ಇಲೆಕ್ಟ್ರಾನಿಕ್ಸ್ ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲಾಯನ್ಸ್, ಸವಿ ಫೂಟ್ ವೇರ್ ಹಾಗೂ ಪ್ರಗತಿ ಎಲೆಕ್ಟ್ರಿಕಲ್ & ರೆಫ್ರಿಜರೇಷನ್ ಸೇಲ್ಸ್ & ಸರ್ವಿಸ್ ಮಳಿಗೆ ಶುಭಾರಂಭ

Suddi Udaya

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

Suddi Udaya

ಕೇಂದ್ರದ ಜನ ಗಣತಿಯ ಜೊತೆ ಜಾತಿ ಗಣತಿ ಸ್ವಾಗತಾರ್ಹ : ರಕ್ಷಿತ್ ಶಿವರಾಂ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
error: Content is protected !!