25.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜು

ಸ್ವಾಮಿ ವಿವೇಕಾನಂದರ ಕುರಿತು ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ

ಬೆಳ್ತಂಗಡಿ: ವಿವೇಕಾನಂದರ ಕುರಿತು ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಇತ್ತೀಚೆಗೆ ವಿವೇಕಾನಂದ ಸೇವಾಶ್ರಮ ಇದರ ಆಶ್ರಯದಲ್ಲಿ ಏರ್ಪಡಿಸಲಾಗಿತ್ತು. ತಾಲೂಕಿನ ಪ್ರೌಢಶಾಲಾ ವಿಭಾಗದ ಮಕ್ಕಳು ಭಾಗವಹಿಸಿದ್ದು, ಪ್ರಥಮ ಸ್ಥಾನವನ್ನು ಕುಮಾರಿ ನಿಷಿತಾ ನೇತಾಗಿ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲೆ ಸವಣಾಲು ದ್ವಿತೀಯ ಸ್ಥಾನವನ್ನು ಶ್ರೇಯಾ ರೋಸ್ಲಿನ್ ಸೈಂಟ್ ಮೇರಿ ಪ್ರೌಢಶಾಲೆ ಲಾಯಿಲ ಇವರು ಪಡೆದುಕೊಂಡರು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಲಾಯಿತು.

ಮುಖ್ಯ ಅತಿಥಿಗಳಾಗಿ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಪ್ರಶಾಂತ್ ಮಕ್ಕಳಲ್ಲಿ ವಿವೇಕಾನಂದರ ಜೀವನ ಚರಿತ್ರೆಯನ್ನು ಓದುವುದರ ಮೂಲಕ ದೇಶ ಪ್ರೇಮವನ್ನು ಬೆಳೆಸಿಕೊಳ್ಳಿ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಸೇವಾಶ್ರಮ ಬೆಳ್ತಂಗಡಿ ಇದರ ಅಧ್ಯಕ್ಷರಾದ ಬಾಲಕೃಷ್ಣ ವಿ. ಶೆಟ್ಟಿ ಸವಣಾಲು, ಸಂಚಾಲಕ ರಾದ ಸುದೀಪ್ ಶೆಟ್ಟಿ ಉಪಾಧ್ಯಕ್ಷರಾದ ಗಿರೀಶ್ ಡೊಂಗ್ರೆ ಕಾರ್ಯದರ್ಶಿಗಳಾದ ಯಶವಂತ್ ದೇವಾಡಿಗ ವೇಣುರು ಹಾಗೂ ಸೇವಾ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾದ ಗಣೇಶ್ ಭಂಡಾರಿ ನಿರ್ದೇಶಕರಾದ ಅಶೋಕ್ ರೈ ಉಪಸ್ಥಿತರಿದ್ದರು.

Related posts

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಎಲ್ ಸಿ ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya
error: Content is protected !!