April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

ಬೆದ್ರಬೆಟ್ಟು: ಶ್ರೀ ಮಹಮ್ಮಾಯಿ ಮಾರಿಗುಡಿ ಬೆದ್ರಬೆಟ್ಟು ಮಹಮ್ಮಾಯಿ ನಗರ (ಮಾಸ್ತಿಕಲ್ಲು) ಬಂಗಾಡಿ ಇದರ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವವು ಇಂದಬೆಟ್ಟು ಶ್ರೀ ಅನಂತರಾಮ ಉಪಾಧ್ಯಾಯ ಇವರ ಪೌರೋಹಿತ್ಯದಲ್ಲಿ ಫೆ. 6, 7 ಮತ್ತು9 ರಂದು ನಡೆಯಲಿದೆ.


ಫೆ.6 ರಂದು ಬೆಳಿಗ್ಗೆ ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಅನ್ನಛತ್ರ ಉದ್ಘಾಟನೆ ನಡೆಯಿತು. ಸಂಜೆ ನಡ, ಕನ್ಯಾಡಿ, ನಾವೂರು, ಇಂದಬೆಟ್ಟು , ಮಲವಂತಿಗೆ, ಮಿತ್ತಬಾಗಿಲು, ಕಡಿರುದ್ಯಾವರ ಗ್ರಾಮಸ್ಥರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ನಂತರ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ವಾಸ್ತು ಪೂಜಾ ಬಲಿ, ರಾಕ್ಷೋಘ್ನ ಹೋಮ ಪ್ರಕಾರ ಬಲಿ, ಅದಿವಾಸ, ಪ್ರಸಾದ ವಿತರಣೆ, ರಾತ್ರಿ ಅನ್ನಸಂತರ್ಪಣೆ ನಡೆಯಿತು.

ಸಂಜೆ ನಡೆದ ಉಗ್ರಾಣ ಉದ್ಘಾಟನೆಯಲ್ಲಿ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಪ್ರಮೋದ್ ಕುಮಾರ್ ಬೆದ್ರಬೆಟ್ಟು , ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು, ಹಾಗೂ ಸದಸ್ಯರು, ವಿವಿಧ ಸಮಿತಿಗಳ ಸಂಚಾಲಕರು, ಸಹಸಂಚಾಲಕರು, ಸದಸ್ಯರು, ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲ್ಯಾನ್, ನಾವೂರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಗಣೇಶ್ ಗೌಡ, ದಾಸಪ್ಪ ಗೌಡ ಕಾಂಜಾನು ಕೊಲ್ಲಿ, ಪ್ರದೀಪ್ ಕುಮಾರ್ ನಾಗಾಜೆ, ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಹರೀಶ್ ಪೂಂಜರ ಜಯಭೇರಿ : ಇಬ್ಬರು ಯುವಕರಿಂದ ಅಳದಂಗಡಿ ದೇವಸ್ಥಾನಕ್ಕೆ ಪಾದಯಾತ್ರೆ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

Suddi Udaya

ಬಂದಾರು ಗ್ರಾ.ಪಂ.ನಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ

Suddi Udaya

ಎ.17: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್‌ಡಿಪಿಐ ಅಭ್ಯರ್ಥಿಗಳಿಂದ ನಾಮಪತ್ರ : ‌ಬೆಳ್ತಂಗಡಿ ನಗರದಲ್ಲಿ ಸಂಚಾರಕ್ಕೆ ಅಡಚಣೆ ಹಿನ್ನಲೆಯಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!