23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

ಬೆದ್ರಬೆಟ್ಟು: ಶ್ರೀ ಮಹಮ್ಮಾಯಿ ಮಾರಿಗುಡಿ ಬೆದ್ರಬೆಟ್ಟು ಮಹಮ್ಮಾಯಿ ನಗರ (ಮಾಸ್ತಿಕಲ್ಲು) ಬಂಗಾಡಿ ಇದರ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವವು ಇಂದಬೆಟ್ಟು ಶ್ರೀ ಅನಂತರಾಮ ಉಪಾಧ್ಯಾಯ ಇವರ ಪೌರೋಹಿತ್ಯದಲ್ಲಿ ಫೆ. 6, 7 ಮತ್ತು9 ರಂದು ನಡೆಯಲಿದೆ.


ಫೆ.6 ರಂದು ಬೆಳಿಗ್ಗೆ ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಅನ್ನಛತ್ರ ಉದ್ಘಾಟನೆ ನಡೆಯಿತು. ಸಂಜೆ ನಡ, ಕನ್ಯಾಡಿ, ನಾವೂರು, ಇಂದಬೆಟ್ಟು , ಮಲವಂತಿಗೆ, ಮಿತ್ತಬಾಗಿಲು, ಕಡಿರುದ್ಯಾವರ ಗ್ರಾಮಸ್ಥರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ನಂತರ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ವಾಸ್ತು ಪೂಜಾ ಬಲಿ, ರಾಕ್ಷೋಘ್ನ ಹೋಮ ಪ್ರಕಾರ ಬಲಿ, ಅದಿವಾಸ, ಪ್ರಸಾದ ವಿತರಣೆ, ರಾತ್ರಿ ಅನ್ನಸಂತರ್ಪಣೆ ನಡೆಯಿತು.

ಸಂಜೆ ನಡೆದ ಉಗ್ರಾಣ ಉದ್ಘಾಟನೆಯಲ್ಲಿ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಪ್ರಮೋದ್ ಕುಮಾರ್ ಬೆದ್ರಬೆಟ್ಟು , ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು, ಹಾಗೂ ಸದಸ್ಯರು, ವಿವಿಧ ಸಮಿತಿಗಳ ಸಂಚಾಲಕರು, ಸಹಸಂಚಾಲಕರು, ಸದಸ್ಯರು, ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲ್ಯಾನ್, ನಾವೂರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಗಣೇಶ್ ಗೌಡ, ದಾಸಪ್ಪ ಗೌಡ ಕಾಂಜಾನು ಕೊಲ್ಲಿ, ಪ್ರದೀಪ್ ಕುಮಾರ್ ನಾಗಾಜೆ, ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Related posts

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಅರಸಿನಮಕ್ಕಿಯ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ಸ್ಥಾನ

Suddi Udaya

ಧರ್ಮಸ್ಥಳ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ವತಿಯಿಂದ ನಿಡಿಗಲ್ ಪರಿಸರದ ಚರಂಡಿಗಳ ಸ್ವಚ್ಛತೆ

Suddi Udaya
error: Content is protected !!