July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

ಬೆದ್ರಬೆಟ್ಟು: ಶ್ರೀ ಮಹಮ್ಮಾಯಿ ಮಾರಿಗುಡಿ ಬೆದ್ರಬೆಟ್ಟು ಮಹಮ್ಮಾಯಿ ನಗರ (ಮಾಸ್ತಿಕಲ್ಲು) ಬಂಗಾಡಿ ಇದರ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವವು ಇಂದಬೆಟ್ಟು ಶ್ರೀ ಅನಂತರಾಮ ಉಪಾಧ್ಯಾಯ ಇವರ ಪೌರೋಹಿತ್ಯದಲ್ಲಿ ಫೆ. 6, 7 ಮತ್ತು9 ರಂದು ನಡೆಯಲಿದೆ.


ಫೆ.6 ರಂದು ಬೆಳಿಗ್ಗೆ ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಅನ್ನಛತ್ರ ಉದ್ಘಾಟನೆ ನಡೆಯಿತು. ಸಂಜೆ ನಡ, ಕನ್ಯಾಡಿ, ನಾವೂರು, ಇಂದಬೆಟ್ಟು , ಮಲವಂತಿಗೆ, ಮಿತ್ತಬಾಗಿಲು, ಕಡಿರುದ್ಯಾವರ ಗ್ರಾಮಸ್ಥರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ನಂತರ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ವಾಸ್ತು ಪೂಜಾ ಬಲಿ, ರಾಕ್ಷೋಘ್ನ ಹೋಮ ಪ್ರಕಾರ ಬಲಿ, ಅದಿವಾಸ, ಪ್ರಸಾದ ವಿತರಣೆ, ರಾತ್ರಿ ಅನ್ನಸಂತರ್ಪಣೆ ನಡೆಯಿತು.

ಸಂಜೆ ನಡೆದ ಉಗ್ರಾಣ ಉದ್ಘಾಟನೆಯಲ್ಲಿ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಪ್ರಮೋದ್ ಕುಮಾರ್ ಬೆದ್ರಬೆಟ್ಟು , ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು, ಹಾಗೂ ಸದಸ್ಯರು, ವಿವಿಧ ಸಮಿತಿಗಳ ಸಂಚಾಲಕರು, ಸಹಸಂಚಾಲಕರು, ಸದಸ್ಯರು, ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲ್ಯಾನ್, ನಾವೂರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಗಣೇಶ್ ಗೌಡ, ದಾಸಪ್ಪ ಗೌಡ ಕಾಂಜಾನು ಕೊಲ್ಲಿ, ಪ್ರದೀಪ್ ಕುಮಾರ್ ನಾಗಾಜೆ, ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ವಿಶೇಷ ಆಹ್ವಾನಿತರ ಸಭೆ: ದೀಪಾವಳಿಯ ತುಡಾರು ಪರ್ಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುತ್ಲೂರು ನಿವಾಸಿ ಶ್ರೀಮತಿ ನಿಧನ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೊಲೇರೋ ವಾಹನ ಡಿಕ್ಕಿ ಹೊಡೆದು ಬಾಲಕಿ ಅನರ್ಘ್ಯಾ ಸಾವನ್ನಪ್ಪಿದ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ಮನವಿ

Suddi Udaya

ಸರಗಳ್ಳತನದ ಆರೋಪಿಯನ್ನು ಬಂಧಿಸಿ, ರೂ 5,05,000 ಮೌಲ್ಯದ ಸೊತ್ತನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

Suddi Udaya
error: Content is protected !!