April 21, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : 2006 ರಲ್ಲಿ ನಡೆದ ಲಾರಿಯ ಅಜಾಗರೂಕತೆಯ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ ಪ್ರಕರಣ ಸಂಬಂಧ ಲಾರಿ ಚಾಲಕನಿಗೆ ಬೆಳ್ತಂಗಡಿ ನ್ಯಾಯಾಲಯಲ್ಲಿ ಒಂದು ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿತ್ತು.ಬಳಿಕ ಈ ಪ್ರಕರಣದ ವಿರುದ್ಧ ಲಾರಿ ಚಾಲಕ ಚಾರ್ಮಾಡಿ ಸಿದ್ದಿಕ್(40) ಹೈಕೋರ್ಟ್ ವರೆಗೆ ಅಪೀಲು ಹೋಗಿದ್ದು ಅಲ್ಲಿ ಕೂಡ ಬೆಳ್ತಂಗಡಿ ನ್ಯಾಯಾಲಯ ತೀರ್ಪನ್ನು ಎತ್ತಿ ಹಿಡಿದು ಶಿಕ್ಷೆ ಖಾಯಂ ಮಾಡಿತ್ತು ಬಳಿಕ ಲಾರಿ ಚಾಲಕ ಆರೋಪಿ ತಲೆಮರೆಸಿಕೊಂಡಿದ್ದು. ಇದೀಗ ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿ ಜೈಲಿಗಟ್ಟಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಪ್ರಕರಣ 117/2006 ಕಲಂ, 279, 304 (ಎ) ಸುಮಾರು 19 ವರ್ಷದ ಹಿಂದಿನ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾದ ಬಳಿಕ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿ ಚಾರ್ಮಾಡಿ ಮಸೀದಿಯ ಅಧ್ಯಕ್ಷನಾಗಿರುವ ಸಿದ್ದಿಕ್(40) ಎಂಬಾತನನ್ನು ಫೆ.6 ರಂದು ಬಂಟ್ವಾಳ ಪೊಲೀಸ್ ಉಪ ಅಧಿಕ್ಷಕರು ವಿಜಯ್ ಪ್ರಸಾದ್ ರವರ ನಿರ್ದೇಶನದಂತೆ, ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ ಜಿ ಸುಬ್ಬಾಪುರ ಮಠ, ಉಪ ನೀರಿಕ್ಷಕರು ಮುರಳೀಧರ ಮತ್ತು ಯಲ್ಲಾಪ್ಪ ರವರ ಮಾರ್ಗದರ್ಶನದಲ್ಲಿ ಠಾಣಾ ಸಿಬ್ಬಂದಿ ವ್ರಷಭ , ಚರಣ್, ದರೇಶ್ ರವರು ಬಂಧಿಸಿ ಬೆಳ್ತಂಗಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು.‌ನ್ಯಾಯಾಲಯ ಮಂಗಳೂರು ಸಬ್ ಜೈಲಿಗೆ ಕಳುಹಿಸಿದ್ದಾರೆ.

Related posts

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳ ಕಾರ್ಯಕ್ಷೇತ್ರದಲ್ಲಿ ‘ಬೆಳಕು’ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ

Suddi Udaya

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya

ಅರಸಿನಮಕ್ಕಿ ರೇಣುಕಾ ಸುಧೀರ್ ಇವರ “ಮರುಗದಿರು ಮನವೇ” ಕೃತಿ ಲೋಕಾರ್ಪಣೆ

Suddi Udaya
error: Content is protected !!