September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಲ್ಲಿ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ ತೋಟತ್ತಾಡಿ, ಶ್ರೀ ಸೋಮನಾಥೇಶ್ವರ ಭಜನಾ ಮಂಡಳಿ ಬೈಲಂಗಡಿ ತೋಟತ್ತಾಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಫೆ 26 ರಂದು ನಡೆಯುವ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು ಬಿಡುಗಡೆಗೊಳಿಸಿದರು.

ಭಜನಾ ಮಂಡಳಿ ಅಧ್ಯಕ್ಷ ತುಂಗಯ್ಯ ಗೌಡ ಅಗರಿ, ಕಾರ್ಯದರ್ಶಿ ಸತೀಶ್ ಪೂಜಾರಿ ಮೂರ್ಜೆ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಸನತ್ ಕುಮಾರ್ ಮೂರ್ಜೆ, ವಿಜಯ ಗೌಡ ಅಗರಿ, ಚಂದ್ರಶೇಖರ ಗೌಡ ಪರಾರಿ, ದಿನೇಶ್ ನಾಯ್ಕ ಕೋಟೆ, ಬಾಲಕೃಷ್ಣ ಗೌಡ ಪಾದೆ, ಭಜನಾ ಮಂಡಳಿ ಉಪಾಧ್ಯಕ್ಷರುಗಳಾದ ಶ್ರೀನಿವಾಸ ಗೌಡ ಕಲ್ಲರಿಗೆ, ಗುರುವಪ್ಪ ಭಂಡಾರಿ ಅಗರಿ, ಜೊತೆ ಕಾರ್ಯದರ್ಶಿ ಜಯಂತ ಗೌಡ ಪರಾರಿ ದೇವಸ್ಥಾನದ ನೌಕರ ಗಿರೀಶ್ ಆಚಾರ್ಯ ಉಪಸ್ಥಿತರಿದ್ದರು.

ಮೊದಲ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ದಿವಾಕರ ಭಟ್ ಬೈಲಂಗಡಿ ಇವರಿಗೆ ನೀಡಿ ಕಾರ್ಯಕ್ರಮಕ್ಕೆ ಆಮಂತ್ರಿಸಲಾಯಿತು.

Related posts

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

Suddi Udaya

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯಕ್ರಮದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಗರ್ಡಾಡಿ: ಕೃಷಿಕ ಅಣ್ಣಿ ಪೂಜಾರಿ ಕೊಡ್ಡಂತ್ರೋಡಿ ನಿಧನ

Suddi Udaya

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

Suddi Udaya
error: Content is protected !!