27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

ಬೆಳ್ತಂಗಡಿ: ಮಿತ್ತಬಾಗಿಲು -ಮಲವಂತಿಗೆ ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ನಿರ್ಮಾಣ ಪ್ರಾರಂಭದ ಸಂದರ್ಭ ನಾರಾಯಣ ಗುರುಗಳ ಆಶೀರ್ವಾದದಂತೆ ಅತೀ ಕಡಿಮೆ ಅವಧಿಯಲ್ಲಿ ಅಂದರೆ ಕೇವಲ ನಾಲ್ಕು ತಿಂಗಳ ಒಳಗಾಗಿ ಭವ್ಯ ಮಂದಿರದ ಜೊತೆಗೆ ಗುರು ಭವನ ನಿರ್ಮಾಣ ಆಗಿತ್ತು.

ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕದ ದಿನದಂದು ಕಾಜೂರಿನ ಪದ್ಮಾವತಿಯವರ ಲಕ್ಷಾಂತರ ರೂಪಾಯಿ ಮೌಲ್ಯದ ಎರಡು ಪವನ್ ಮಾಂಗಲ್ಯ ಸರಮಾಲೆ ಕಳೆದುಕೊಂಡು ಬಿಟ್ಟಿದ್ದರು, ಹುಡುಕಾಟ ಕೂಡ ಆ ಸಮಯದಲ್ಲಿ ನಡೆಸಲಾಗಿತ್ತು,ಗುರುಗಳ ಮೌಲ್ಯ ಅರಿತ ಅವರು ಏನಾದರೂ ಮಾಂಗಲ್ಯ ಸರಮಾಲೆ ಸಿಕ್ಕಿದರೆ ಗುರುಪೂಜೆ ಇದೇ ಮಂದಿರದಲ್ಲಿ ನಡೆಸುತ್ತೇನೆ ಎಂದು ಹರಕೆ ಹೊತ್ತುಕೊಂಡಿದ್ದರು.

ಹರಕೆ ಹೊತ್ತ ಫಲವೋ, ಅವರ ಪೂರ್ವ ಜನ್ಮದ ಪುಣ್ಯವೋ ಕಲಶೋತ್ಸವ ಕಳೆದು ಒಂದು ತಿಂಗಳ ಒಳಗಾಗಿ ಅವರ ಮಾಂಗಲ್ಯ ಸರಮಾಲೆ ಯಾವುದೇ ರೀತಿಯಲ್ಲಿ ಕಳೆಗುಂದದೆ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ಆವರಣದಲ್ಲಿ ಸಿಕ್ಕಿದೆ.ಮಾಂಗಲ್ಯ ಸರಮಾಲೆ ಸಿಕ್ಕಿದ ಸಮಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿದ ಸಮಯ ಒಂದೇ ಆಗಿತ್ತು ಎಂದು ಸಂಘದ ಮುಖ್ಯಸ್ಥರಾದ ಸುರೇಂದ್ರ ಕೊಲ್ಲಿ ತಿಳಿಸಿದ್ದಾರೆ.

Related posts

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾ ಮತ್ತು ಕರಕುಶಲ ಚಟುವಟಿಕೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಗೆ ಶೇ.100 ಸಾಧನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಆಚರಣೆ

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

Suddi Udaya
error: Content is protected !!