July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

ಬೆಳ್ತಂಗಡಿ: ಮಿತ್ತಬಾಗಿಲು -ಮಲವಂತಿಗೆ ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ನಿರ್ಮಾಣ ಪ್ರಾರಂಭದ ಸಂದರ್ಭ ನಾರಾಯಣ ಗುರುಗಳ ಆಶೀರ್ವಾದದಂತೆ ಅತೀ ಕಡಿಮೆ ಅವಧಿಯಲ್ಲಿ ಅಂದರೆ ಕೇವಲ ನಾಲ್ಕು ತಿಂಗಳ ಒಳಗಾಗಿ ಭವ್ಯ ಮಂದಿರದ ಜೊತೆಗೆ ಗುರು ಭವನ ನಿರ್ಮಾಣ ಆಗಿತ್ತು.

ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕದ ದಿನದಂದು ಕಾಜೂರಿನ ಪದ್ಮಾವತಿಯವರ ಲಕ್ಷಾಂತರ ರೂಪಾಯಿ ಮೌಲ್ಯದ ಎರಡು ಪವನ್ ಮಾಂಗಲ್ಯ ಸರಮಾಲೆ ಕಳೆದುಕೊಂಡು ಬಿಟ್ಟಿದ್ದರು, ಹುಡುಕಾಟ ಕೂಡ ಆ ಸಮಯದಲ್ಲಿ ನಡೆಸಲಾಗಿತ್ತು,ಗುರುಗಳ ಮೌಲ್ಯ ಅರಿತ ಅವರು ಏನಾದರೂ ಮಾಂಗಲ್ಯ ಸರಮಾಲೆ ಸಿಕ್ಕಿದರೆ ಗುರುಪೂಜೆ ಇದೇ ಮಂದಿರದಲ್ಲಿ ನಡೆಸುತ್ತೇನೆ ಎಂದು ಹರಕೆ ಹೊತ್ತುಕೊಂಡಿದ್ದರು.

ಹರಕೆ ಹೊತ್ತ ಫಲವೋ, ಅವರ ಪೂರ್ವ ಜನ್ಮದ ಪುಣ್ಯವೋ ಕಲಶೋತ್ಸವ ಕಳೆದು ಒಂದು ತಿಂಗಳ ಒಳಗಾಗಿ ಅವರ ಮಾಂಗಲ್ಯ ಸರಮಾಲೆ ಯಾವುದೇ ರೀತಿಯಲ್ಲಿ ಕಳೆಗುಂದದೆ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ಆವರಣದಲ್ಲಿ ಸಿಕ್ಕಿದೆ.ಮಾಂಗಲ್ಯ ಸರಮಾಲೆ ಸಿಕ್ಕಿದ ಸಮಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿದ ಸಮಯ ಒಂದೇ ಆಗಿತ್ತು ಎಂದು ಸಂಘದ ಮುಖ್ಯಸ್ಥರಾದ ಸುರೇಂದ್ರ ಕೊಲ್ಲಿ ತಿಳಿಸಿದ್ದಾರೆ.

Related posts

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿಂದೂ ಸಂಘಟನೆಗಳಿಂದ ಇಂದು(ಮೇ 2) ದ.ಕ ಜಿಲ್ಲೆ ಬಂದ್ ಗೆ ಕರೆ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಭೇಟಿ

Suddi Udaya

ಬೆಸ್ಟ್ ಫೌಂಡೇಶನ್ ವತಿಯಿಂದ ಪೆರೋಡಿತ್ತಾಯಕಟ್ಟೆ ಸ.ಹಿ.ಪ್ರಾ. ಶಾಲಾ ಮಕ್ಕಳಿಗೆ ಉಚಿತ ನೋಟ್‌ ಪುಸ್ತಕ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ

Suddi Udaya

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya
error: Content is protected !!