ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

ಬೆಳ್ತಂಗಡಿ: ಮಿತ್ತಬಾಗಿಲು -ಮಲವಂತಿಗೆ ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ನಿರ್ಮಾಣ ಪ್ರಾರಂಭದ ಸಂದರ್ಭ ನಾರಾಯಣ ಗುರುಗಳ ಆಶೀರ್ವಾದದಂತೆ ಅತೀ ಕಡಿಮೆ ಅವಧಿಯಲ್ಲಿ ಅಂದರೆ ಕೇವಲ ನಾಲ್ಕು ತಿಂಗಳ ಒಳಗಾಗಿ ಭವ್ಯ ಮಂದಿರದ ಜೊತೆಗೆ ಗುರು ಭವನ ನಿರ್ಮಾಣ ಆಗಿತ್ತು.

ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕದ ದಿನದಂದು ಕಾಜೂರಿನ ಪದ್ಮಾವತಿಯವರ ಲಕ್ಷಾಂತರ ರೂಪಾಯಿ ಮೌಲ್ಯದ ಎರಡು ಪವನ್ ಮಾಂಗಲ್ಯ ಸರಮಾಲೆ ಕಳೆದುಕೊಂಡು ಬಿಟ್ಟಿದ್ದರು, ಹುಡುಕಾಟ ಕೂಡ ಆ ಸಮಯದಲ್ಲಿ ನಡೆಸಲಾಗಿತ್ತು,ಗುರುಗಳ ಮೌಲ್ಯ ಅರಿತ ಅವರು ಏನಾದರೂ ಮಾಂಗಲ್ಯ ಸರಮಾಲೆ ಸಿಕ್ಕಿದರೆ ಗುರುಪೂಜೆ ಇದೇ ಮಂದಿರದಲ್ಲಿ ನಡೆಸುತ್ತೇನೆ ಎಂದು ಹರಕೆ ಹೊತ್ತುಕೊಂಡಿದ್ದರು.

ಹರಕೆ ಹೊತ್ತ ಫಲವೋ, ಅವರ ಪೂರ್ವ ಜನ್ಮದ ಪುಣ್ಯವೋ ಕಲಶೋತ್ಸವ ಕಳೆದು ಒಂದು ತಿಂಗಳ ಒಳಗಾಗಿ ಅವರ ಮಾಂಗಲ್ಯ ಸರಮಾಲೆ ಯಾವುದೇ ರೀತಿಯಲ್ಲಿ ಕಳೆಗುಂದದೆ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ಆವರಣದಲ್ಲಿ ಸಿಕ್ಕಿದೆ.ಮಾಂಗಲ್ಯ ಸರಮಾಲೆ ಸಿಕ್ಕಿದ ಸಮಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿದ ಸಮಯ ಒಂದೇ ಆಗಿತ್ತು ಎಂದು ಸಂಘದ ಮುಖ್ಯಸ್ಥರಾದ ಸುರೇಂದ್ರ ಕೊಲ್ಲಿ ತಿಳಿಸಿದ್ದಾರೆ.

Related posts

ಜ.7-12: ಬಂದಾರು ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಾ | ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಚಾರ ಮಂಟಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಕೊಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಗೆ ಚಾಲನೆ

Suddi Udaya

ಬಳಂಜ: ಪುಣ್ಕೆದೊಟ್ಟು ನಿವಾಸಿ ಚಂದ್ರು ನಿಧನ

Suddi Udaya

ಕಡಿದು ಬಿದ್ದ ವಿದ್ಯುತ್ ತಂತಿ, ಬೈಕ್ ಸವಾರರು ಪಾರು

Suddi Udaya
error: Content is protected !!