July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

ಬೆದ್ರಬೆಟ್ಟು: ಶ್ರೀ ಮಹಮ್ಮಾಯಿ ಮಾರಿಗುಡಿ ಬೆದ್ರಬೆಟ್ಟು ಮಹಮ್ಮಾಯಿ ನಗರ (ಮಾಸ್ತಿಕಲ್ಲು) ಬಂಗಾಡಿ ಇದರ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವವು ಇಂದಬೆಟ್ಟು ಶ್ರೀ ಅನಂತರಾಮ ಉಪಾಧ್ಯಾಯ ಇವರ ಪೌರೋಹಿತ್ಯದಲ್ಲಿ ಫೆ. 6, 7 ಮತ್ತು9 ರಂದು ನಡೆಯಲಿದೆ.


ಫೆ.6 ರಂದು ಬೆಳಿಗ್ಗೆ ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಅನ್ನಛತ್ರ ಉದ್ಘಾಟನೆ ನಡೆಯಿತು. ಸಂಜೆ ನಡ, ಕನ್ಯಾಡಿ, ನಾವೂರು, ಇಂದಬೆಟ್ಟು , ಮಲವಂತಿಗೆ, ಮಿತ್ತಬಾಗಿಲು, ಕಡಿರುದ್ಯಾವರ ಗ್ರಾಮಸ್ಥರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ನಂತರ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ವಾಸ್ತು ಪೂಜಾ ಬಲಿ, ರಾಕ್ಷೋಘ್ನ ಹೋಮ ಪ್ರಕಾರ ಬಲಿ, ಅದಿವಾಸ, ಪ್ರಸಾದ ವಿತರಣೆ, ರಾತ್ರಿ ಅನ್ನಸಂತರ್ಪಣೆ ನಡೆಯಿತು.

ಸಂಜೆ ನಡೆದ ಉಗ್ರಾಣ ಉದ್ಘಾಟನೆಯಲ್ಲಿ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಪ್ರಮೋದ್ ಕುಮಾರ್ ಬೆದ್ರಬೆಟ್ಟು , ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು, ಹಾಗೂ ಸದಸ್ಯರು, ವಿವಿಧ ಸಮಿತಿಗಳ ಸಂಚಾಲಕರು, ಸಹಸಂಚಾಲಕರು, ಸದಸ್ಯರು, ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲ್ಯಾನ್, ನಾವೂರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಗಣೇಶ್ ಗೌಡ, ದಾಸಪ್ಪ ಗೌಡ ಕಾಂಜಾನು ಕೊಲ್ಲಿ, ಪ್ರದೀಪ್ ಕುಮಾರ್ ನಾಗಾಜೆ, ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Related posts

ಔಷಧ ರಹಿತ ಚಿಕಿತ್ಸಾ ಸೇವೆಗೆ ಆರೋಗ್ಯ ಸೇವಾ ರತ್ನ ಪ್ರಶಸ್ತಿ: ಸುಕೇಶ್ ಕುಮಾರ್ ಜೈನ್‌ ರವರಿಗೆ ಗೌರವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ದಂಪತಿ ಭೇಟಿ

Suddi Udaya

ಉಜಿರೆಯಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya
error: Content is protected !!