ಉಜಿರೆಯ ಶ್ರೀ ಧ. ಮಂ. ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ| ಹಾಮಾನಾ ಸಂಶೊಧನ ಕೇಂದ್ರದ ಅಭ್ಯರ್ಥಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ ದೊರೆತಿದೆ.
ಇವರು ಡಾ. ಬಿ. ಪಿ. ಸಂಪತ್ ಕುಮಾರ ಅವರ ಮಾರ್ಗದರ್ಶನದಲ್ಲಿ ಸುಳ್ಯ ಪರಿಸರದ ಕನ್ನಡ ಕಥನ ಸಾಹಿತ್ಯದಲ್ಲಿ ಸ್ತ್ರೀ ಪ್ರತಿನಿಧೀಕರಣ ಎಂಬ ವಿಷಯದ ಮೇಲೆ ಮಹಾಪ್ರಬಂಧ ರಚಿಸಿ ಪಿಎಚ್. ಡಿ. ಪದವಿಗಾಗಿ ಕನ್ನಡ ವಿಶ್ವವಿದ್ಯಾಲಯಕ್ಕೆ ಮಂಡನೆ ಮಾಡಿದ್ದರು.
ಪ್ರಸ್ತುತ ಇವರು ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕೇಂದ್ರದ ಸಂಯೋಜನಾಧಿಕಾರಿ ಡಾ. ದಿವ ಕೊಕ್ಕಡ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.