July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : 2006 ರಲ್ಲಿ ನಡೆದ ಲಾರಿಯ ಅಜಾಗರೂಕತೆಯ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ ಪ್ರಕರಣ ಸಂಬಂಧ ಲಾರಿ ಚಾಲಕನಿಗೆ ಬೆಳ್ತಂಗಡಿ ನ್ಯಾಯಾಲಯಲ್ಲಿ ಒಂದು ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿತ್ತು.ಬಳಿಕ ಈ ಪ್ರಕರಣದ ವಿರುದ್ಧ ಲಾರಿ ಚಾಲಕ ಚಾರ್ಮಾಡಿ ಸಿದ್ದಿಕ್(40) ಹೈಕೋರ್ಟ್ ವರೆಗೆ ಅಪೀಲು ಹೋಗಿದ್ದು ಅಲ್ಲಿ ಕೂಡ ಬೆಳ್ತಂಗಡಿ ನ್ಯಾಯಾಲಯ ತೀರ್ಪನ್ನು ಎತ್ತಿ ಹಿಡಿದು ಶಿಕ್ಷೆ ಖಾಯಂ ಮಾಡಿತ್ತು ಬಳಿಕ ಲಾರಿ ಚಾಲಕ ಆರೋಪಿ ತಲೆಮರೆಸಿಕೊಂಡಿದ್ದು. ಇದೀಗ ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿ ಜೈಲಿಗಟ್ಟಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಪ್ರಕರಣ 117/2006 ಕಲಂ, 279, 304 (ಎ) ಸುಮಾರು 19 ವರ್ಷದ ಹಿಂದಿನ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾದ ಬಳಿಕ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿ ಚಾರ್ಮಾಡಿ ಮಸೀದಿಯ ಅಧ್ಯಕ್ಷನಾಗಿರುವ ಸಿದ್ದಿಕ್(40) ಎಂಬಾತನನ್ನು ಫೆ.6 ರಂದು ಬಂಟ್ವಾಳ ಪೊಲೀಸ್ ಉಪ ಅಧಿಕ್ಷಕರು ವಿಜಯ್ ಪ್ರಸಾದ್ ರವರ ನಿರ್ದೇಶನದಂತೆ, ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ ಜಿ ಸುಬ್ಬಾಪುರ ಮಠ, ಉಪ ನೀರಿಕ್ಷಕರು ಮುರಳೀಧರ ಮತ್ತು ಯಲ್ಲಾಪ್ಪ ರವರ ಮಾರ್ಗದರ್ಶನದಲ್ಲಿ ಠಾಣಾ ಸಿಬ್ಬಂದಿ ವ್ರಷಭ , ಚರಣ್, ದರೇಶ್ ರವರು ಬಂಧಿಸಿ ಬೆಳ್ತಂಗಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು.‌ನ್ಯಾಯಾಲಯ ಮಂಗಳೂರು ಸಬ್ ಜೈಲಿಗೆ ಕಳುಹಿಸಿದ್ದಾರೆ.

Related posts

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

Suddi Udaya

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

Suddi Udaya

ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ, ಕಠಿಣ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಜಿಲ್ಲಾಧಿಕಾರಿಯವರಿಗೆ, ಪೊಲೀಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ

Suddi Udaya

ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಸವಣಾಲಿನಲ್ಲಿ ಬೈಕ್- ಬೈಕ್ ನಡುವೆ ಅಪಘಾತ : ಆಳದಂಗಡಿ ಹಾ.ಉ.ಸ.ಸಂಘದ ಮಾಜಿ ಕಾರ್ಯದರ್ಶಿ ಹೆನ್ರಿ ಡಿ’ ಸೋಜ ಮೃತ್ಯು

Suddi Udaya
error: Content is protected !!