23.1 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

ಬೆಳ್ತಂಗಡಿ: ಮಿತ್ತಬಾಗಿಲು -ಮಲವಂತಿಗೆ ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ನಿರ್ಮಾಣ ಪ್ರಾರಂಭದ ಸಂದರ್ಭ ನಾರಾಯಣ ಗುರುಗಳ ಆಶೀರ್ವಾದದಂತೆ ಅತೀ ಕಡಿಮೆ ಅವಧಿಯಲ್ಲಿ ಅಂದರೆ ಕೇವಲ ನಾಲ್ಕು ತಿಂಗಳ ಒಳಗಾಗಿ ಭವ್ಯ ಮಂದಿರದ ಜೊತೆಗೆ ಗುರು ಭವನ ನಿರ್ಮಾಣ ಆಗಿತ್ತು.

ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕದ ದಿನದಂದು ಕಾಜೂರಿನ ಪದ್ಮಾವತಿಯವರ ಲಕ್ಷಾಂತರ ರೂಪಾಯಿ ಮೌಲ್ಯದ ಎರಡು ಪವನ್ ಮಾಂಗಲ್ಯ ಸರಮಾಲೆ ಕಳೆದುಕೊಂಡು ಬಿಟ್ಟಿದ್ದರು, ಹುಡುಕಾಟ ಕೂಡ ಆ ಸಮಯದಲ್ಲಿ ನಡೆಸಲಾಗಿತ್ತು,ಗುರುಗಳ ಮೌಲ್ಯ ಅರಿತ ಅವರು ಏನಾದರೂ ಮಾಂಗಲ್ಯ ಸರಮಾಲೆ ಸಿಕ್ಕಿದರೆ ಗುರುಪೂಜೆ ಇದೇ ಮಂದಿರದಲ್ಲಿ ನಡೆಸುತ್ತೇನೆ ಎಂದು ಹರಕೆ ಹೊತ್ತುಕೊಂಡಿದ್ದರು.

ಹರಕೆ ಹೊತ್ತ ಫಲವೋ, ಅವರ ಪೂರ್ವ ಜನ್ಮದ ಪುಣ್ಯವೋ ಕಲಶೋತ್ಸವ ಕಳೆದು ಒಂದು ತಿಂಗಳ ಒಳಗಾಗಿ ಅವರ ಮಾಂಗಲ್ಯ ಸರಮಾಲೆ ಯಾವುದೇ ರೀತಿಯಲ್ಲಿ ಕಳೆಗುಂದದೆ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ಆವರಣದಲ್ಲಿ ಸಿಕ್ಕಿದೆ.ಮಾಂಗಲ್ಯ ಸರಮಾಲೆ ಸಿಕ್ಕಿದ ಸಮಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿದ ಸಮಯ ಒಂದೇ ಆಗಿತ್ತು ಎಂದು ಸಂಘದ ಮುಖ್ಯಸ್ಥರಾದ ಸುರೇಂದ್ರ ಕೊಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya

ಮಂಗಳೂರಿನ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯುವ ಗಣೇಶೋತ್ಸವಕ್ಕೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಹೊರಕಾಣಿಕೆ ಸಮರ್ಪಣೆ

Suddi Udaya

ರೆಖ್ಯ: ನಾಪತ್ತೆಯಾಗಿದ್ದ ಉರ್ನಡ್ಕ ನಿವಾಸಿ ಲೋಕೇಶ್ ರವರ ಮೃತದೇಹ ಪತ್ತೆ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ದಾಮೋದರ ಶೆಟ್ಟಿಅನಾರೋಗ್ಯದಿಂದ ನಿಧನ

Suddi Udaya
error: Content is protected !!