24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

ಬೆಳ್ತಂಗಡಿ: ಮಿತ್ತಬಾಗಿಲು -ಮಲವಂತಿಗೆ ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ನಿರ್ಮಾಣ ಪ್ರಾರಂಭದ ಸಂದರ್ಭ ನಾರಾಯಣ ಗುರುಗಳ ಆಶೀರ್ವಾದದಂತೆ ಅತೀ ಕಡಿಮೆ ಅವಧಿಯಲ್ಲಿ ಅಂದರೆ ಕೇವಲ ನಾಲ್ಕು ತಿಂಗಳ ಒಳಗಾಗಿ ಭವ್ಯ ಮಂದಿರದ ಜೊತೆಗೆ ಗುರು ಭವನ ನಿರ್ಮಾಣ ಆಗಿತ್ತು.

ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕದ ದಿನದಂದು ಕಾಜೂರಿನ ಪದ್ಮಾವತಿಯವರ ಲಕ್ಷಾಂತರ ರೂಪಾಯಿ ಮೌಲ್ಯದ ಎರಡು ಪವನ್ ಮಾಂಗಲ್ಯ ಸರಮಾಲೆ ಕಳೆದುಕೊಂಡು ಬಿಟ್ಟಿದ್ದರು, ಹುಡುಕಾಟ ಕೂಡ ಆ ಸಮಯದಲ್ಲಿ ನಡೆಸಲಾಗಿತ್ತು,ಗುರುಗಳ ಮೌಲ್ಯ ಅರಿತ ಅವರು ಏನಾದರೂ ಮಾಂಗಲ್ಯ ಸರಮಾಲೆ ಸಿಕ್ಕಿದರೆ ಗುರುಪೂಜೆ ಇದೇ ಮಂದಿರದಲ್ಲಿ ನಡೆಸುತ್ತೇನೆ ಎಂದು ಹರಕೆ ಹೊತ್ತುಕೊಂಡಿದ್ದರು.

ಹರಕೆ ಹೊತ್ತ ಫಲವೋ, ಅವರ ಪೂರ್ವ ಜನ್ಮದ ಪುಣ್ಯವೋ ಕಲಶೋತ್ಸವ ಕಳೆದು ಒಂದು ತಿಂಗಳ ಒಳಗಾಗಿ ಅವರ ಮಾಂಗಲ್ಯ ಸರಮಾಲೆ ಯಾವುದೇ ರೀತಿಯಲ್ಲಿ ಕಳೆಗುಂದದೆ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ಆವರಣದಲ್ಲಿ ಸಿಕ್ಕಿದೆ.ಮಾಂಗಲ್ಯ ಸರಮಾಲೆ ಸಿಕ್ಕಿದ ಸಮಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿದ ಸಮಯ ಒಂದೇ ಆಗಿತ್ತು ಎಂದು ಸಂಘದ ಮುಖ್ಯಸ್ಥರಾದ ಸುರೇಂದ್ರ ಕೊಲ್ಲಿ ತಿಳಿಸಿದ್ದಾರೆ.

Related posts

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

Suddi Udaya

ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಬೆಳ್ತಂಗಡಿ: ಜಯಲಕ್ಷ್ಮಿ ಲೇತ್ ಅಂಡ್ ಇಂಜಿನಿಯರಿಂಗ್ ವರ್ಕ್ ಶಾಪ್ ಪುನರಾರಂಭ

Suddi Udaya
error: Content is protected !!