July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

ಬೆಳ್ತಂಗಡಿ: ಮಿತ್ತಬಾಗಿಲು -ಮಲವಂತಿಗೆ ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ನಿರ್ಮಾಣ ಪ್ರಾರಂಭದ ಸಂದರ್ಭ ನಾರಾಯಣ ಗುರುಗಳ ಆಶೀರ್ವಾದದಂತೆ ಅತೀ ಕಡಿಮೆ ಅವಧಿಯಲ್ಲಿ ಅಂದರೆ ಕೇವಲ ನಾಲ್ಕು ತಿಂಗಳ ಒಳಗಾಗಿ ಭವ್ಯ ಮಂದಿರದ ಜೊತೆಗೆ ಗುರು ಭವನ ನಿರ್ಮಾಣ ಆಗಿತ್ತು.

ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕದ ದಿನದಂದು ಕಾಜೂರಿನ ಪದ್ಮಾವತಿಯವರ ಲಕ್ಷಾಂತರ ರೂಪಾಯಿ ಮೌಲ್ಯದ ಎರಡು ಪವನ್ ಮಾಂಗಲ್ಯ ಸರಮಾಲೆ ಕಳೆದುಕೊಂಡು ಬಿಟ್ಟಿದ್ದರು, ಹುಡುಕಾಟ ಕೂಡ ಆ ಸಮಯದಲ್ಲಿ ನಡೆಸಲಾಗಿತ್ತು,ಗುರುಗಳ ಮೌಲ್ಯ ಅರಿತ ಅವರು ಏನಾದರೂ ಮಾಂಗಲ್ಯ ಸರಮಾಲೆ ಸಿಕ್ಕಿದರೆ ಗುರುಪೂಜೆ ಇದೇ ಮಂದಿರದಲ್ಲಿ ನಡೆಸುತ್ತೇನೆ ಎಂದು ಹರಕೆ ಹೊತ್ತುಕೊಂಡಿದ್ದರು.

ಹರಕೆ ಹೊತ್ತ ಫಲವೋ, ಅವರ ಪೂರ್ವ ಜನ್ಮದ ಪುಣ್ಯವೋ ಕಲಶೋತ್ಸವ ಕಳೆದು ಒಂದು ತಿಂಗಳ ಒಳಗಾಗಿ ಅವರ ಮಾಂಗಲ್ಯ ಸರಮಾಲೆ ಯಾವುದೇ ರೀತಿಯಲ್ಲಿ ಕಳೆಗುಂದದೆ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ಆವರಣದಲ್ಲಿ ಸಿಕ್ಕಿದೆ.ಮಾಂಗಲ್ಯ ಸರಮಾಲೆ ಸಿಕ್ಕಿದ ಸಮಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿದ ಸಮಯ ಒಂದೇ ಆಗಿತ್ತು ಎಂದು ಸಂಘದ ಮುಖ್ಯಸ್ಥರಾದ ಸುರೇಂದ್ರ ಕೊಲ್ಲಿ ತಿಳಿಸಿದ್ದಾರೆ.

Related posts

ಉಜಿರೆ: ರತ್ನಮಾನಸದಲ್ಲಿ ಮಾತೃ, ಪಿತೃ ,ಪೋಷಕರ ಸಭೆ ಹಾಗೂ ಗುರು ವಂದನ ಕಾರ್ಯಕ್ರಮ

Suddi Udaya

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

Suddi Udaya

ಬೆಳಾಲು: ಮುಕುತ್ತಿ ಮಜಲು ಸೇತುವೆ ನಿರ್ಮಾಣಕ್ಕೆ ಅನುದಾನ ಕಲ್ಪಿಸಿದ ಶಾಸಕ ಹರೀಶ್‌ ಪೂಂಜರಿಗೆ ಅಭಿನಂದನೆ

Suddi Udaya

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

Suddi Udaya

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

Suddi Udaya
error: Content is protected !!