25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

ಬೆಳ್ತಂಗಡಿ: ಮಿತ್ತಬಾಗಿಲು -ಮಲವಂತಿಗೆ ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ನಿರ್ಮಾಣ ಪ್ರಾರಂಭದ ಸಂದರ್ಭ ನಾರಾಯಣ ಗುರುಗಳ ಆಶೀರ್ವಾದದಂತೆ ಅತೀ ಕಡಿಮೆ ಅವಧಿಯಲ್ಲಿ ಅಂದರೆ ಕೇವಲ ನಾಲ್ಕು ತಿಂಗಳ ಒಳಗಾಗಿ ಭವ್ಯ ಮಂದಿರದ ಜೊತೆಗೆ ಗುರು ಭವನ ನಿರ್ಮಾಣ ಆಗಿತ್ತು.

ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕದ ದಿನದಂದು ಕಾಜೂರಿನ ಪದ್ಮಾವತಿಯವರ ಲಕ್ಷಾಂತರ ರೂಪಾಯಿ ಮೌಲ್ಯದ ಎರಡು ಪವನ್ ಮಾಂಗಲ್ಯ ಸರಮಾಲೆ ಕಳೆದುಕೊಂಡು ಬಿಟ್ಟಿದ್ದರು, ಹುಡುಕಾಟ ಕೂಡ ಆ ಸಮಯದಲ್ಲಿ ನಡೆಸಲಾಗಿತ್ತು,ಗುರುಗಳ ಮೌಲ್ಯ ಅರಿತ ಅವರು ಏನಾದರೂ ಮಾಂಗಲ್ಯ ಸರಮಾಲೆ ಸಿಕ್ಕಿದರೆ ಗುರುಪೂಜೆ ಇದೇ ಮಂದಿರದಲ್ಲಿ ನಡೆಸುತ್ತೇನೆ ಎಂದು ಹರಕೆ ಹೊತ್ತುಕೊಂಡಿದ್ದರು.

ಹರಕೆ ಹೊತ್ತ ಫಲವೋ, ಅವರ ಪೂರ್ವ ಜನ್ಮದ ಪುಣ್ಯವೋ ಕಲಶೋತ್ಸವ ಕಳೆದು ಒಂದು ತಿಂಗಳ ಒಳಗಾಗಿ ಅವರ ಮಾಂಗಲ್ಯ ಸರಮಾಲೆ ಯಾವುದೇ ರೀತಿಯಲ್ಲಿ ಕಳೆಗುಂದದೆ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ಆವರಣದಲ್ಲಿ ಸಿಕ್ಕಿದೆ.ಮಾಂಗಲ್ಯ ಸರಮಾಲೆ ಸಿಕ್ಕಿದ ಸಮಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿದ ಸಮಯ ಒಂದೇ ಆಗಿತ್ತು ಎಂದು ಸಂಘದ ಮುಖ್ಯಸ್ಥರಾದ ಸುರೇಂದ್ರ ಕೊಲ್ಲಿ ತಿಳಿಸಿದ್ದಾರೆ.

Related posts

ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಸಾರಥ್ಯದಲ್ಲಿ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೋಸೆ ಹಬ್ಬಕ್ಕೆ ಚಾಲನೆ

Suddi Udaya

ಕಾಂಕ್ರೀಟ್ ರಸ್ತೆಯಲ್ಲಿ ಶೇಖರಣೆಗೊಂಡ ಮಣ್ಣು ತೆರವುಗೊಳಿಸಿದ ಯುವಕರು: ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

Suddi Udaya

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya

ಬೆಳ್ತಂಗಡಿ: ಡಿಕೆಡಿಆರ್‌ಎಸ್ ಸಂಸ್ಥೆಯಲ್ಲಿ ಕ್ಲಸ್ಟರ್ ಮಟ್ಟದ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಎಸ್‌ಜಿಎಫ್‌ಐ (SGFI) ರಾಷ್ಟ್ರೀಯ ಕಬಡ್ಡಿ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಭಾಗಿ

Suddi Udaya
error: Content is protected !!