22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸ್ಟಾರ್ ಲೈನ್ ಶಾಲೆ: ಎಸ್.ಜೆ.ಎಮ್ ರಾಜ್ಯ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ

ಸ್ಟಾರ್ ಲೈನ್ ಅರೆಬಿಕ್ ಮದರಸ ಹಾಗೂ ಸ್ಟಾರ್ ಲೈನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಗೆ
ಫೆ.7 ರಂದು ಸುನ್ನಿ ಜಂಇಯ್ಯತುಲ್ ಮುಅಲ್ಲಿ ಮೀನ್ ಇದರ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ ನೀಡಿದ ಶಾಲೆಯಲ್ಲಿನ ಅರಬಿಕ್ ಶಿಕ್ಷಣ ಚಟುವಟಿಕೆಗಳ ಬಗ್ಗೆ ಚರ್ಚಿಸಿ ಪ್ರಶಂಸೆ ವ್ಯಕ್ತಪಡಿಸಿದರು.

10ನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳು ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಎಸ್ ಎಸ್ ಎಫ್ ಆಯೋಜಿಸಿರುವ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ಭಾಗವಹಿಸಿ ಉರ್ದು ಭಾಷಣದಲ್ಲಿ ಪ್ರಥಮ ಸ್ಥಾನ ಗಳಿಸಿದ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ರವರನ್ನು ಅಭಿನಂದಿಸಿದರು.

ಅಹ್ಲುಸುನ್ನತ್ ವಲ್ ಜಮಾಅತ್ ಇದರ ಆಶಯ ಆದರ್ಶಗಳನ್ನು ಇಸ್ಲಾಂಮಿನ ಚೌಕಟ್ಟಿನಲ್ಲಿ ಮುನ್ನಡೆಸುವಲ್ಲಿ ನೇತೃತ್ವ ವಹಿಸಿಕೊಂಡಿರುವ ಜನಾಬ್ ಸಯ್ಯದ್ ಹಬೀಬ್ ಹಾಜಿ, ಆಡಳಿತ ಟ್ರಸ್ಟ್ , ಹಾಗೂ ಅಧ್ಯಾಪಕ ವೃಂದಕ್ಕೂ, ವಿದ್ಯಾರ್ಥಿಗಳಿಗೂ, ಪೋಷಕರಿಗೂ ಪ್ರತ್ಯೇಕವಾಗಿ ಪ್ರಾರ್ಥನೆ ಮಾಡಿದರು. ಸಂಸ್ಥೆಯ ಪ್ರದಾನ ಕಾರ್ಯದರ್ಶಿ ಸಯ್ಯದ್ ಅಯ್ಯೂಬ್, ಅರಬಿಕ್ ಮುಖ್ಯೋಪಾಧ್ಯಾಯರು ಅಬ್ದುರ್ರಝಾಖ್ ಇಂದಾದಿ ನಾವೂರು ಸಹ ಅಧ್ಯಾಪಕರಾದ, ಮುಹಮ್ಮದ್ ಅಶ್ರಫ್ ಹಿಮಮಿ, ಅಬ್ದುಲ್ ಖಾದರ್ ಮಿಸ್ಬಾಹಿ, ಯಾಕೂಬ್ ಮದನಿ, ಮುಹಮ್ಮದ್ ಮುಸ್ಲಿಯಾರ್, ಉಪಸ್ಥಿತರಿದ್ದರು.

Related posts

ದ.ಕ.ಜಿಲ್ಲೆಯ ಕಡಲ ತೀರದ ಕೊರೆತವನ್ನು ತಡೆಗಟ್ಟಲು ಶಾಶ್ವತವಾಗಿ ಪರಿಹಾರ ರೂಪಿಸಿ – ವಿಧಾನಪರಿಷತ್ತಿನಲ್ಲಿ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ಕಚೇರಿಯ ವಿಜಯ ರೈ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಜ.9: ವಿದ್ಯುತ್ ನಿಲುಗಡೆ

Suddi Udaya

ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

Suddi Udaya
error: Content is protected !!