23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ: ಸಾಯಿ ಕುಮಾರ್ ಶೆಟ್ಟಿ ನವಶಕ್ತಿ ಇವರಿಂದ ಕಾಯಾ೯ಲಯದ ಉದ್ಘಾಟನೆ

ಗುರುವಾಯನಕೆರೆ: ಭಕ್ತರ ಪಾಲಿನ ಕಾರಣಿಕ ಕ್ಷೇತ್ರವಾಗಿ, ಅಜಿಲ ಸೀಮೆಯಲ್ಲಿ ಕಲಿಯುಗದ ಕೈಲಾಸವೆಂದೇ ಹೆಗ್ಗಳಿಕೆ ಪಡೆದಿರುವ ಕುವೆಟ್ಟು ಗ್ರಾಮದ ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವವು ಧರ್ಮಸ್ಥಳ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ, ಮಡಂತ್ಯಾರು ವೇ.ಮೂ. ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಫೆ.9ರಿಂದ ಫೆ.13ರ ತನಕ ನಡೆಯಲಿದ್ದು, ಇದರ ಅಂಗವಾಗಿ ಕಾಯಾ೯ಲಯದ ಉದ್ಘಾಟನೆ ಫೆ.7ರಂದು ಜರುಗಿತು.


ಕಾಯಾ೯ಲಯದ ಉದ್ಘಾಟನೆಯನ್ನು ಸಾಯಿ ಕುಮಾರ್ ಶೆಟ್ಟಿ ನವಶಕ್ತಿ ಶಕ್ತಿನಗರ ನೇರವೇರಿಸಿ, ಶುಭ ಹಾರೈಸಿದರು. ರಾಜೇಶ್ ಶೆಟ್ಟಿ ನವಶಕ್ತಿ ಆಗಮಿಸಿ ಶುಭ ಕೋರಿದರು.
ಪೂಜಾ ವಿಧಿಯನ್ನು ಪ್ರಧಾನ ಅಚ೯ಕ ರತ್ನಾಕರ ನೂರಿತ್ತಾಯ ನೇರವೇರಿಸಿದರು.
ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಸುಖೇಶ್ ಕುಮಾರ್ ಕಡಂಬು, ಪ್ರವೀಣ್ ಕುಮಾರ್ ಅಜ್ರಿ ಪಡ್ಯಾರು ಬೀಡು, ಬ್ರಹ್ಮಕುಂಭಾಭಿಷೇಕ ಸಮಿತಿಯ ಕಾರ್ಯಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಧಾನ ಕಾರ್ಯದರ್ಶಿ ಪುರಂದರ ಶೆಟ್ಟಿ, ಪಾಡ್ಯಾರು, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ, ವಾತ್ಸಲ್ಯ , ಪ್ರಮುಖರಾದ , ಸುನೀಶ್ ಕುಮಾರ್,ಆನಂದ ಶೆಟ್ಟಿ ವಾತ್ಸಲ್ಯ, ಸುಭಾಷ್ ಚಂದ್ರ ಜೈನ್ ಶ್ರೀ ಸ್ವಸ್ತಿಕ್, ಸೀತಾರಾಮ ಶೆಟ್ಟಿ ವೈಭವ್, ರಾಜಪ್ಪ ಶೆಟ್ಟಿ ಸುಧೇಕ್ಕಾರ್, ಗೋಪಿನಾಥ್ ನಾಯಕ್,
ಕಾಯಾ೯ಲಯ‌ ಸಮಿತಿ ಸಂಚಾಲಕ ರಾಮಚಂದ್ರ ಶೆಟ್ಟಿ, ಸಹ ಸಂಚಾಲಕ ವಸಂತ ಗೌಡ ವರಕಬೆ, ಆನಂದ ಕೋಟ್ಯಾನ್, ಸುಧಾಮಣಿ, ಪ್ರಿಯಾ ಹೆಗ್ಡೆ, ಶ್ರೀಮತಿ ಮಂಗಳಾ, ಪ್ರಜ್ವಲ್ ಶೆಟ್ಟಿ ಪಾಡ್ಯಾರು, ನಾರಾಯಣ ಪೂಜಾರಿ ಕಡಂಬು, ಮಧುರಾಜ್ ಹಾಗೂ ವಿತೇಶ್ ಜೈನ್ ಪಡಂಗಡಿ, ರಮಾನಂದ ಸಾಲ್ಯಾನ್, ದಾಮೋದರ್, ತಿಲಕ್ ರಾಜ್, ನಾರಾಯಣ ಆಚಾರ್ಯ ಬರಾಯ, ವಿತೇಶ್ ಬಂಗೇರ, ರವಿ ಚಕ್ಕಿತ್ತಾಯ ಉಪಸ್ಥಿತರಿದ್ದರು.

ನಿತಿನ್ ಬಂಗೇರ ಬರಾಯ ಕಾಯ೯ಕ್ರಮ ನಿರೂಪಿಸಿದರು.

ಫೆ.9: ಹೊರೆಕಾಣಿಕೆಯ ಭವ್ಯ ಶೋಭಾಯಾತ್ರೆ:
ಫೆ.9ರಂದು ಸಂಜೆ 5ಕ್ಕೆ ನವಶಕ್ತಿ ಕ್ರೀಡಾಂಗಣ ಶಕ್ತಿನಗರದಿಂದ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟಕ್ಕೆ ವೈಭವಪೂರ್ಣ ಮೆರವಣಿಗೆಯೊಂದಿಗೆ ಹೊರೆಕಾಣಿಕೆ ಭವ್ಯ ಶೋಭಾಯಾತ್ರೆ ನೆರವೇರಲಿರುವುದು. ಬೆಳಿಗ್ಗೆ 9:೦೦ ರಿಂದ ಮಧ್ಯಾಹ್ನ ಗಂಟೆ 2:೦೦ ರ ತನಕ ಬ್ರಹ್ಮಕುಂಭಾಭಿಷೇಕಕ್ಕೆ ನೀಡುವ ಹೊರೆಕಾಣಿಕೆಯನ್ನು ಪಡಂಗಡಿ – ಶ್ರೀ ಅಯ್ಯಪ್ಪ ಮಂದಿರ, ಪೊಯ್ಯಗುಡ್ಡೆ, ಓಡಿಲ್ನಾಳ – ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮದ್ದಡ್ಕ ಶ್ರೀ ರಾಮ ಭಜನಾ ಮಂದಿರ, ಮದ್ದಡ್ಕ, ಶಕ್ತಿನಗರ- ನವಶಕ್ತಿ ಕ್ರೀಡಾಂಗಣ ಗುರುವಾಯನಕೆರೆ- ಹವ್ಯಕ ಭವನ ಈ ಪ್ರದೇಶಗಳಿಂದ ಸ್ವೀಕರಿಸಲಿದ್ದಾರೆ.
ಫೆ.12ರಂದು ಬೆಳಿಗ್ಗೆ ಗಣಹೋಮ, ಶುಭ ಮುಹೂರ್ತದಲ್ಲಿ ದೈವ ಪ್ರತಿಷ್ಠೆ, ಪ್ರತಿಷ್ಠಾ ಹೋಮ, ಪ್ರತಿಷ್ಠಾ ಕಲಶಾಭಿಷೇಕ, ಪರಿಕಲಶಾಭಿಷೇಕ, ಕುಂಭ ಸಂಕ್ರಮಣದ, ಕುಂಭಲಗ್ನದಲ್ಲಿ ಪ್ರಧಾನ ಕುಂಭಾಭಿಷೇಕ ಪೂಜೆ, ಪಂಚ ಪರ್ವ ಪೂಜೆ, ಧ್ವಜಾರೋಹಣ, ಬಲಿ ಉತ್ಸವ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಉತ್ಸವ. ರಾತ್ರಿ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ ಜರಗಲಿರುವುದು.

Related posts

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

Suddi Udaya

ಧರ್ಮಸ್ಥಳ ಪ್ರಕರಣ : ಸ್ವಾಮೀಜಿಗಳ ನಿಯೋಗದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ಭೇಟಿ, ಎನ್ಐಎ ತನಿಖೆಗೆ ವಹಿಸುವಂತೆ ಮನವಿ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ತಣ್ಣೀರುಪಂತ ಕೆದ್ಯೇಲು ಎಂಬಲ್ಲಿ ಅಪಾಯಕಾರಿ ಕಾಲುದಾರಿ : ಸ್ಥಳಕ್ಕೆ ತಹಶೀಲ್ದಾರ್‌ ಪೃಥ್ವಿ ಸಾನಿಕಂ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಭೇಟಿ: ನಾಗರೀಕರು ಹಾಗೂ ಶಾಲಾ ಮಕ್ಕಳು ತುರ್ಕಳಿಕೆ ಶಾಲೆಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ

Suddi Udaya

ಮಾಲಾಡಿಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!