September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

ಕಣಿಯೂರು : 2024 25ನೇ ಸಾಲಿನ ವಿಕಲ ಚೇತನ ವಿಶೇಷ ಗ್ರಾಮ ಸಭೆಯು ಸರ್ಕಾರದ ಆದೇಶದಂತೆ ಫೆ.07 ರಂದು ಕಣಿಯೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು,

2024-25ನೇ ಸಾಲಿನ ವಿಕಲಚೇತನರ ವಾರ್ಷಿಕ ವರದಿಯನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಚಿರಂಜೀವಿ ಶೆಟ್ಟಿ ಇವರು ವಾಚಿಸಿದರು,
ವಿಕಲಚೇತನರಿಗೆ ವಿಕಲಚೇತನ ಇಲಾಖೆ ಹಾಗೂ ಎಲ್ಲಾ ಇಲಾಖೆಗಳಿಂದ ಸಿಗುವ ಸರಕಾರದ ಸೌಲಭ್ಯದ ಸಮಗ್ರ ಮಾಹಿತಿಯನ್ನು ತಾಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಜೋನ್‌ ಬ್ಯಾಪ್ಟಿಸ್ಟ್ ಡಿಸೋಜ‌ ನೀಡಿದರು.


ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಪಂಚಾಯತಿಯಿಂದ ವಿಕಲಚೇತನರಿಗೆ ಸಿಗುವ ಸೌಲಭ್ಯಗಳ ಮಾಹಿತಿ ನೀಡಿದರು ಮತ್ತು ಪ್ರಸಕ್ತ ಸಾಲಿನಲ್ಲಿ 02 ಜನ ವಿಕಲಚೇತನರಿಗೆ ವಾಟರ್ ಮತ್ತು ಕಮೊಡೋ ಹಸ್ತಂತರಿಸಲಾಯಿತು, ಹಾಗೂ ಎಲ್ಲಾ ವಿಶೇಷ ಚೇತನ ಬಂಧುಗಳಿಗೆ ರೈತ ಭಂಧು ಮಾರುತಿಪುರ ಕಣಿಯೂರು ಇವರು 5g ಯಂತೆ ಅಕ್ಕಿ ಕಿಟ್ ನೀಡಿ ಸಹಕರಿಸಿರುತ್ತಾರೆ, ಹಾಗೆ ಎಲ್ಲಾ ವಿಶೇಷ ಚೇತನ ಬಂಧುಗಳಿಗೆ ನೆರೆದಿರುವ ಎಲ್ಲರಿಗೂ ಉಪಹಾರದ ವ್ಯವಸ್ಥೆಯನ್ನು ಮಾಜಿ ಸದಸ್ಯರು ಆದ ಶುಕೂರ್ ಇವರು ನೀಡಿ ಸಹಕರಿಸಿರುತ್ತಾರೆ,

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗೀತಾ ಆರ್ ಸಾಲಿಯಾನ್, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಜಾನಕಿ , ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಗಾಯತ್ರಿ , ಪಂಚಾಯತ್ ಸದಸ್ಯರಾದ ಉಮಾವತಿ ,ಸುಮತಿ,
ಮತ್ತು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಆದ ರಾಧಿಕಾ ಇಲಂತಿಲ ಗ್ರಾಮ ಪಂಚಾಯತ್ ಕೀರ್ಥನ್ ಕೊಯ್ಯುರು, ಗ್ರಾಮ ಪಂಚಾಯತ್ ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಪಂಚಾಯತ್ ಕಾರ್ಯದರ್ಶಿ ಸ್ವಾಗತಿಸಿ, ಧನ್ಯವಾದ ಸಲ್ಲಿಸಿದರು.

Related posts

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Suddi Udaya

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya

ಜು.7: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya

ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿಗೆ ಅಂತಾರಾಷ್ಟ್ರೀಯ ಗಣ್ಯರ ಭೇಟಿ: ಜಪಾನ್ ದೇಶದ ಪ್ರೋ. ಮಾಸ ಕಟೋಕ, ಕಾಂಬೋಡಿಯಾ ಸಚಿವ ಇಕೆ ಬುಂತ  ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!