23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

ಬೆದ್ರಬೆಟ್ಟು: ಶ್ರೀ ಮಹಮ್ಮಾಯಿ ಮಾರಿಗುಡಿ ಬೆದ್ರಬೆಟ್ಟು ಮಹಮ್ಮಾಯಿ ನಗರ (ಮಾಸ್ತಿಕಲ್ಲು) ಬಂಗಾಡಿ ಇದರ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವವು ಇಂದಬೆಟ್ಟು ಶ್ರೀ ಅನಂತರಾಮ ಉಪಾಧ್ಯಾಯ ಇವರ ಪೌರೋಹಿತ್ಯದಲ್ಲಿ ಫೆ. 6, 7 ಮತ್ತು9 ರಂದು ನಡೆಯಲಿದೆ.


ಫೆ.6 ರಂದು ಬೆಳಿಗ್ಗೆ ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಅನ್ನಛತ್ರ ಉದ್ಘಾಟನೆ ನಡೆಯಿತು. ಸಂಜೆ ನಡ, ಕನ್ಯಾಡಿ, ನಾವೂರು, ಇಂದಬೆಟ್ಟು , ಮಲವಂತಿಗೆ, ಮಿತ್ತಬಾಗಿಲು, ಕಡಿರುದ್ಯಾವರ ಗ್ರಾಮಸ್ಥರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ನಂತರ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ವಾಸ್ತು ಪೂಜಾ ಬಲಿ, ರಾಕ್ಷೋಘ್ನ ಹೋಮ ಪ್ರಕಾರ ಬಲಿ, ಅದಿವಾಸ, ಪ್ರಸಾದ ವಿತರಣೆ, ರಾತ್ರಿ ಅನ್ನಸಂತರ್ಪಣೆ ನಡೆಯಿತು.

ಸಂಜೆ ನಡೆದ ಉಗ್ರಾಣ ಉದ್ಘಾಟನೆಯಲ್ಲಿ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಪ್ರಮೋದ್ ಕುಮಾರ್ ಬೆದ್ರಬೆಟ್ಟು , ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು, ಹಾಗೂ ಸದಸ್ಯರು, ವಿವಿಧ ಸಮಿತಿಗಳ ಸಂಚಾಲಕರು, ಸಹಸಂಚಾಲಕರು, ಸದಸ್ಯರು, ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲ್ಯಾನ್, ನಾವೂರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಗಣೇಶ್ ಗೌಡ, ದಾಸಪ್ಪ ಗೌಡ ಕಾಂಜಾನು ಕೊಲ್ಲಿ, ಪ್ರದೀಪ್ ಕುಮಾರ್ ನಾಗಾಜೆ, ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಮಲ್ಲರ್ಮಾಡಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೈಕ್ ಗೆ ಅಡ್ಡ ಬಂದ ನಾಯಿ:ಪತ್ರಿಕೆ ವಿತರಕನಿಗೆ ಗಾಯ

Suddi Udaya

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

Suddi Udaya
error: Content is protected !!