25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

ಬೆದ್ರಬೆಟ್ಟು: ಶ್ರೀ ಮಹಮ್ಮಾಯಿ ಮಾರಿಗುಡಿ ಬೆದ್ರಬೆಟ್ಟು ಮಹಮ್ಮಾಯಿ ನಗರ (ಮಾಸ್ತಿಕಲ್ಲು) ಬಂಗಾಡಿ ಇದರ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವವು ಇಂದಬೆಟ್ಟು ಶ್ರೀ ಅನಂತರಾಮ ಉಪಾಧ್ಯಾಯ ಇವರ ಪೌರೋಹಿತ್ಯದಲ್ಲಿ ಫೆ. 6, 7 ಮತ್ತು9 ರಂದು ನಡೆಯಲಿದೆ.


ಫೆ.6 ರಂದು ಬೆಳಿಗ್ಗೆ ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಅನ್ನಛತ್ರ ಉದ್ಘಾಟನೆ ನಡೆಯಿತು. ಸಂಜೆ ನಡ, ಕನ್ಯಾಡಿ, ನಾವೂರು, ಇಂದಬೆಟ್ಟು , ಮಲವಂತಿಗೆ, ಮಿತ್ತಬಾಗಿಲು, ಕಡಿರುದ್ಯಾವರ ಗ್ರಾಮಸ್ಥರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ನಂತರ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ವಾಸ್ತು ಪೂಜಾ ಬಲಿ, ರಾಕ್ಷೋಘ್ನ ಹೋಮ ಪ್ರಕಾರ ಬಲಿ, ಅದಿವಾಸ, ಪ್ರಸಾದ ವಿತರಣೆ, ರಾತ್ರಿ ಅನ್ನಸಂತರ್ಪಣೆ ನಡೆಯಿತು.

ಸಂಜೆ ನಡೆದ ಉಗ್ರಾಣ ಉದ್ಘಾಟನೆಯಲ್ಲಿ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಪ್ರಮೋದ್ ಕುಮಾರ್ ಬೆದ್ರಬೆಟ್ಟು , ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು, ಹಾಗೂ ಸದಸ್ಯರು, ವಿವಿಧ ಸಮಿತಿಗಳ ಸಂಚಾಲಕರು, ಸಹಸಂಚಾಲಕರು, ಸದಸ್ಯರು, ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲ್ಯಾನ್, ನಾವೂರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಗಣೇಶ್ ಗೌಡ, ದಾಸಪ್ಪ ಗೌಡ ಕಾಂಜಾನು ಕೊಲ್ಲಿ, ಪ್ರದೀಪ್ ಕುಮಾರ್ ನಾಗಾಜೆ, ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Related posts

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya

ಬಳಂಜ ಬದಿನಡೆ ನಾಗಬ್ರಹ್ಮ ಕ್ಷೇತ್ರದ ವರ್ಷಾವಧಿ ಜಾತ್ರೋತ್ಸವ ಸಂಪನ್ನ

Suddi Udaya

ಕಾಂಗ್ರೆಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ ಇದಕ್ಕೆ ಇತ್ತೀಚಿನ ಕೃಷಿ ಸಚಿವರ ನಡೆಯೇ ಸಾಕ್ಷಿಯಾಗಿದೆ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಆರಂಭ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

Suddi Udaya
error: Content is protected !!