25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : 2006 ರಲ್ಲಿ ನಡೆದ ಲಾರಿಯ ಅಜಾಗರೂಕತೆಯ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ ಪ್ರಕರಣ ಸಂಬಂಧ ಲಾರಿ ಚಾಲಕನಿಗೆ ಬೆಳ್ತಂಗಡಿ ನ್ಯಾಯಾಲಯಲ್ಲಿ ಒಂದು ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿತ್ತು.ಬಳಿಕ ಈ ಪ್ರಕರಣದ ವಿರುದ್ಧ ಲಾರಿ ಚಾಲಕ ಚಾರ್ಮಾಡಿ ಸಿದ್ದಿಕ್(40) ಹೈಕೋರ್ಟ್ ವರೆಗೆ ಅಪೀಲು ಹೋಗಿದ್ದು ಅಲ್ಲಿ ಕೂಡ ಬೆಳ್ತಂಗಡಿ ನ್ಯಾಯಾಲಯ ತೀರ್ಪನ್ನು ಎತ್ತಿ ಹಿಡಿದು ಶಿಕ್ಷೆ ಖಾಯಂ ಮಾಡಿತ್ತು ಬಳಿಕ ಲಾರಿ ಚಾಲಕ ಆರೋಪಿ ತಲೆಮರೆಸಿಕೊಂಡಿದ್ದು. ಇದೀಗ ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿ ಜೈಲಿಗಟ್ಟಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಪ್ರಕರಣ 117/2006 ಕಲಂ, 279, 304 (ಎ) ಸುಮಾರು 19 ವರ್ಷದ ಹಿಂದಿನ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾದ ಬಳಿಕ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿ ಚಾರ್ಮಾಡಿ ಮಸೀದಿಯ ಅಧ್ಯಕ್ಷನಾಗಿರುವ ಸಿದ್ದಿಕ್(40) ಎಂಬಾತನನ್ನು ಫೆ.6 ರಂದು ಬಂಟ್ವಾಳ ಪೊಲೀಸ್ ಉಪ ಅಧಿಕ್ಷಕರು ವಿಜಯ್ ಪ್ರಸಾದ್ ರವರ ನಿರ್ದೇಶನದಂತೆ, ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ ಜಿ ಸುಬ್ಬಾಪುರ ಮಠ, ಉಪ ನೀರಿಕ್ಷಕರು ಮುರಳೀಧರ ಮತ್ತು ಯಲ್ಲಾಪ್ಪ ರವರ ಮಾರ್ಗದರ್ಶನದಲ್ಲಿ ಠಾಣಾ ಸಿಬ್ಬಂದಿ ವ್ರಷಭ , ಚರಣ್, ದರೇಶ್ ರವರು ಬಂಧಿಸಿ ಬೆಳ್ತಂಗಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು.‌ನ್ಯಾಯಾಲಯ ಮಂಗಳೂರು ಸಬ್ ಜೈಲಿಗೆ ಕಳುಹಿಸಿದ್ದಾರೆ.

Related posts

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನಲ್ಲಿ ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗೂ ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ

Suddi Udaya

ಬೆಳ್ತಂಗಡಿ:ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: ರೂ. 123 ಕೋಟಿ ವ್ಯವಹಾರ, ರೂ. 50 ಲಕ್ಷ ಲಾಭ, ಶೇ.12 ಡಿವಿಡೆಂಡ್

Suddi Udaya

ಶಿಬಾಜೆ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಪಿಕಪ್ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಸಂಚಾಲಕರಾಗಿ ಅಬ್ದುಲ್ ಖಾದರ್ ನಾವೂರು ಆಯ್ಕೆ

Suddi Udaya

ಖೋ ಖೋ ಪಂದ್ಯಾಟ : ನಯನಾಡು ಸರಕಾರಿ‌ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!