25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : 2006 ರಲ್ಲಿ ನಡೆದ ಲಾರಿಯ ಅಜಾಗರೂಕತೆಯ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ ಪ್ರಕರಣ ಸಂಬಂಧ ಲಾರಿ ಚಾಲಕನಿಗೆ ಬೆಳ್ತಂಗಡಿ ನ್ಯಾಯಾಲಯಲ್ಲಿ ಒಂದು ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿತ್ತು.ಬಳಿಕ ಈ ಪ್ರಕರಣದ ವಿರುದ್ಧ ಲಾರಿ ಚಾಲಕ ಚಾರ್ಮಾಡಿ ಸಿದ್ದಿಕ್(40) ಹೈಕೋರ್ಟ್ ವರೆಗೆ ಅಪೀಲು ಹೋಗಿದ್ದು ಅಲ್ಲಿ ಕೂಡ ಬೆಳ್ತಂಗಡಿ ನ್ಯಾಯಾಲಯ ತೀರ್ಪನ್ನು ಎತ್ತಿ ಹಿಡಿದು ಶಿಕ್ಷೆ ಖಾಯಂ ಮಾಡಿತ್ತು ಬಳಿಕ ಲಾರಿ ಚಾಲಕ ಆರೋಪಿ ತಲೆಮರೆಸಿಕೊಂಡಿದ್ದು. ಇದೀಗ ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿ ಜೈಲಿಗಟ್ಟಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಪ್ರಕರಣ 117/2006 ಕಲಂ, 279, 304 (ಎ) ಸುಮಾರು 19 ವರ್ಷದ ಹಿಂದಿನ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾದ ಬಳಿಕ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿ ಚಾರ್ಮಾಡಿ ಮಸೀದಿಯ ಅಧ್ಯಕ್ಷನಾಗಿರುವ ಸಿದ್ದಿಕ್(40) ಎಂಬಾತನನ್ನು ಫೆ.6 ರಂದು ಬಂಟ್ವಾಳ ಪೊಲೀಸ್ ಉಪ ಅಧಿಕ್ಷಕರು ವಿಜಯ್ ಪ್ರಸಾದ್ ರವರ ನಿರ್ದೇಶನದಂತೆ, ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ ಜಿ ಸುಬ್ಬಾಪುರ ಮಠ, ಉಪ ನೀರಿಕ್ಷಕರು ಮುರಳೀಧರ ಮತ್ತು ಯಲ್ಲಾಪ್ಪ ರವರ ಮಾರ್ಗದರ್ಶನದಲ್ಲಿ ಠಾಣಾ ಸಿಬ್ಬಂದಿ ವ್ರಷಭ , ಚರಣ್, ದರೇಶ್ ರವರು ಬಂಧಿಸಿ ಬೆಳ್ತಂಗಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು.‌ನ್ಯಾಯಾಲಯ ಮಂಗಳೂರು ಸಬ್ ಜೈಲಿಗೆ ಕಳುಹಿಸಿದ್ದಾರೆ.

Related posts

ನಡ ಸ. ಪ. ಪೂ ಕಾಲೇಜಿನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಉದ್ಘಾಟನೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ವಿದ್ಯಾಮಾತಾದ ವಿದ್ಯಾರ್ಥಿಗಳಿಬ್ಬರು ಕೆ -ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಕಳೆದುಹೋದ ಪರ್ಸ ನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಶಿಶಿಲದ ಕೊರಗಪ್ಪ ಗೌಡ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕಾರ

Suddi Udaya
error: Content is protected !!