July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : 2006 ರಲ್ಲಿ ನಡೆದ ಲಾರಿಯ ಅಜಾಗರೂಕತೆಯ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ ಪ್ರಕರಣ ಸಂಬಂಧ ಲಾರಿ ಚಾಲಕನಿಗೆ ಬೆಳ್ತಂಗಡಿ ನ್ಯಾಯಾಲಯಲ್ಲಿ ಒಂದು ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿತ್ತು.ಬಳಿಕ ಈ ಪ್ರಕರಣದ ವಿರುದ್ಧ ಲಾರಿ ಚಾಲಕ ಚಾರ್ಮಾಡಿ ಸಿದ್ದಿಕ್(40) ಹೈಕೋರ್ಟ್ ವರೆಗೆ ಅಪೀಲು ಹೋಗಿದ್ದು ಅಲ್ಲಿ ಕೂಡ ಬೆಳ್ತಂಗಡಿ ನ್ಯಾಯಾಲಯ ತೀರ್ಪನ್ನು ಎತ್ತಿ ಹಿಡಿದು ಶಿಕ್ಷೆ ಖಾಯಂ ಮಾಡಿತ್ತು ಬಳಿಕ ಲಾರಿ ಚಾಲಕ ಆರೋಪಿ ತಲೆಮರೆಸಿಕೊಂಡಿದ್ದು. ಇದೀಗ ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿ ಜೈಲಿಗಟ್ಟಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಪ್ರಕರಣ 117/2006 ಕಲಂ, 279, 304 (ಎ) ಸುಮಾರು 19 ವರ್ಷದ ಹಿಂದಿನ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾದ ಬಳಿಕ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿ ಚಾರ್ಮಾಡಿ ಮಸೀದಿಯ ಅಧ್ಯಕ್ಷನಾಗಿರುವ ಸಿದ್ದಿಕ್(40) ಎಂಬಾತನನ್ನು ಫೆ.6 ರಂದು ಬಂಟ್ವಾಳ ಪೊಲೀಸ್ ಉಪ ಅಧಿಕ್ಷಕರು ವಿಜಯ್ ಪ್ರಸಾದ್ ರವರ ನಿರ್ದೇಶನದಂತೆ, ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ ಜಿ ಸುಬ್ಬಾಪುರ ಮಠ, ಉಪ ನೀರಿಕ್ಷಕರು ಮುರಳೀಧರ ಮತ್ತು ಯಲ್ಲಾಪ್ಪ ರವರ ಮಾರ್ಗದರ್ಶನದಲ್ಲಿ ಠಾಣಾ ಸಿಬ್ಬಂದಿ ವ್ರಷಭ , ಚರಣ್, ದರೇಶ್ ರವರು ಬಂಧಿಸಿ ಬೆಳ್ತಂಗಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು.‌ನ್ಯಾಯಾಲಯ ಮಂಗಳೂರು ಸಬ್ ಜೈಲಿಗೆ ಕಳುಹಿಸಿದ್ದಾರೆ.

Related posts

ಕನ್ಯಾಡಿ -2 ಸ.ಉ. ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಪಡಂಗಡಿ ರಸ್ತೆಯ ಗುಂಡಿಗಳನ್ನು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ದುರಸ್ಥಿ

Suddi Udaya

ಉಜಿರೆ: ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗುರುವಾಯನಕೆರೆ ಅಯ್ಯಪ್ಪ ಭಕ್ತರ ಮಹಾಸಂಗಮ ಸಮಾವೇಶದಲ್ಲಿ ಸಂಪತ್ ಬಿ. ಸುವರ್ಣ ರವರಿಂದ 7 ಹಕ್ಕೋತ್ತಾಯಗಳ ಮಂಡನೆ

Suddi Udaya

ಕಳೆದುಕೊಂಡಿದ್ದ ಚಿನ್ನವನ್ನು ಮರಳಿ ದಂಪತಿಗಳಿಗೆ ಹಸ್ತಾಂತರಿಸಿದ ಲಾಡ್ಜ್ ಮಾಲೀಕ

Suddi Udaya

ವಾಣಿ ಆಂ.ಮಾ. ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!