38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

ಬೆಳ್ತಂಗಡಿ: ಮಿತ್ತಬಾಗಿಲು -ಮಲವಂತಿಗೆ ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ನಿರ್ಮಾಣ ಪ್ರಾರಂಭದ ಸಂದರ್ಭ ನಾರಾಯಣ ಗುರುಗಳ ಆಶೀರ್ವಾದದಂತೆ ಅತೀ ಕಡಿಮೆ ಅವಧಿಯಲ್ಲಿ ಅಂದರೆ ಕೇವಲ ನಾಲ್ಕು ತಿಂಗಳ ಒಳಗಾಗಿ ಭವ್ಯ ಮಂದಿರದ ಜೊತೆಗೆ ಗುರು ಭವನ ನಿರ್ಮಾಣ ಆಗಿತ್ತು.

ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕದ ದಿನದಂದು ಕಾಜೂರಿನ ಪದ್ಮಾವತಿಯವರ ಲಕ್ಷಾಂತರ ರೂಪಾಯಿ ಮೌಲ್ಯದ ಎರಡು ಪವನ್ ಮಾಂಗಲ್ಯ ಸರಮಾಲೆ ಕಳೆದುಕೊಂಡು ಬಿಟ್ಟಿದ್ದರು, ಹುಡುಕಾಟ ಕೂಡ ಆ ಸಮಯದಲ್ಲಿ ನಡೆಸಲಾಗಿತ್ತು,ಗುರುಗಳ ಮೌಲ್ಯ ಅರಿತ ಅವರು ಏನಾದರೂ ಮಾಂಗಲ್ಯ ಸರಮಾಲೆ ಸಿಕ್ಕಿದರೆ ಗುರುಪೂಜೆ ಇದೇ ಮಂದಿರದಲ್ಲಿ ನಡೆಸುತ್ತೇನೆ ಎಂದು ಹರಕೆ ಹೊತ್ತುಕೊಂಡಿದ್ದರು.

ಹರಕೆ ಹೊತ್ತ ಫಲವೋ, ಅವರ ಪೂರ್ವ ಜನ್ಮದ ಪುಣ್ಯವೋ ಕಲಶೋತ್ಸವ ಕಳೆದು ಒಂದು ತಿಂಗಳ ಒಳಗಾಗಿ ಅವರ ಮಾಂಗಲ್ಯ ಸರಮಾಲೆ ಯಾವುದೇ ರೀತಿಯಲ್ಲಿ ಕಳೆಗುಂದದೆ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ಆವರಣದಲ್ಲಿ ಸಿಕ್ಕಿದೆ.ಮಾಂಗಲ್ಯ ಸರಮಾಲೆ ಸಿಕ್ಕಿದ ಸಮಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿದ ಸಮಯ ಒಂದೇ ಆಗಿತ್ತು ಎಂದು ಸಂಘದ ಮುಖ್ಯಸ್ಥರಾದ ಸುರೇಂದ್ರ ಕೊಲ್ಲಿ ತಿಳಿಸಿದ್ದಾರೆ.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96 ಫಲಿತಾಂಶ

Suddi Udaya

ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಡಿಗಲ್: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಶಾಂಭವಿ ವಿಲಾಸ ಯಕ್ಷಗಾನ ಪ್ರದರ್ಶನ

Suddi Udaya

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರೋತ್ಸವ

Suddi Udaya
error: Content is protected !!