24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

ಬೆಳ್ತಂಗಡಿ: ಮಿತ್ತಬಾಗಿಲು -ಮಲವಂತಿಗೆ ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ನಿರ್ಮಾಣ ಪ್ರಾರಂಭದ ಸಂದರ್ಭ ನಾರಾಯಣ ಗುರುಗಳ ಆಶೀರ್ವಾದದಂತೆ ಅತೀ ಕಡಿಮೆ ಅವಧಿಯಲ್ಲಿ ಅಂದರೆ ಕೇವಲ ನಾಲ್ಕು ತಿಂಗಳ ಒಳಗಾಗಿ ಭವ್ಯ ಮಂದಿರದ ಜೊತೆಗೆ ಗುರು ಭವನ ನಿರ್ಮಾಣ ಆಗಿತ್ತು.

ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕದ ದಿನದಂದು ಕಾಜೂರಿನ ಪದ್ಮಾವತಿಯವರ ಲಕ್ಷಾಂತರ ರೂಪಾಯಿ ಮೌಲ್ಯದ ಎರಡು ಪವನ್ ಮಾಂಗಲ್ಯ ಸರಮಾಲೆ ಕಳೆದುಕೊಂಡು ಬಿಟ್ಟಿದ್ದರು, ಹುಡುಕಾಟ ಕೂಡ ಆ ಸಮಯದಲ್ಲಿ ನಡೆಸಲಾಗಿತ್ತು,ಗುರುಗಳ ಮೌಲ್ಯ ಅರಿತ ಅವರು ಏನಾದರೂ ಮಾಂಗಲ್ಯ ಸರಮಾಲೆ ಸಿಕ್ಕಿದರೆ ಗುರುಪೂಜೆ ಇದೇ ಮಂದಿರದಲ್ಲಿ ನಡೆಸುತ್ತೇನೆ ಎಂದು ಹರಕೆ ಹೊತ್ತುಕೊಂಡಿದ್ದರು.

ಹರಕೆ ಹೊತ್ತ ಫಲವೋ, ಅವರ ಪೂರ್ವ ಜನ್ಮದ ಪುಣ್ಯವೋ ಕಲಶೋತ್ಸವ ಕಳೆದು ಒಂದು ತಿಂಗಳ ಒಳಗಾಗಿ ಅವರ ಮಾಂಗಲ್ಯ ಸರಮಾಲೆ ಯಾವುದೇ ರೀತಿಯಲ್ಲಿ ಕಳೆಗುಂದದೆ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ಆವರಣದಲ್ಲಿ ಸಿಕ್ಕಿದೆ.ಮಾಂಗಲ್ಯ ಸರಮಾಲೆ ಸಿಕ್ಕಿದ ಸಮಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿದ ಸಮಯ ಒಂದೇ ಆಗಿತ್ತು ಎಂದು ಸಂಘದ ಮುಖ್ಯಸ್ಥರಾದ ಸುರೇಂದ್ರ ಕೊಲ್ಲಿ ತಿಳಿಸಿದ್ದಾರೆ.

Related posts

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸೆ.15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡರಿಂದ ಪ್ರಚಾರಕ್ಕೆ ಚಾಲನೆ

Suddi Udaya

ಚಾರ್ಮಾಡಿಯಲ್ಲಿ ಮತದಾನ ವಿಳಂಬ : ಡಿ ಮಸ್ಟರಿಂಗ್ ಕೇಂದ್ರ ಕ್ಕೆ ಹೊರಟ ವಾಹನ ತಡೆಗಟ್ಟಿದ ಜನರ‌ ಮೇಲೆ ಪೊಲೀಸರ ಲಾಠಿಚಾರ್ಜ್ : ಹಲವಾರು ಮಂದಿಗೆ ಗಾಯ

Suddi Udaya

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

Suddi Udaya

ನಾಲ್ಕೂರು ಗ್ರಾಮದ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಯ ಹಿಂಭಾಗ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ಇಂದು ಬಿಜೆಪಿ ಮಂಡಲದಿಂದ ಭೇಟಿ

Suddi Udaya

ಉಜಿರೆ ಶ್ರೀ ಜನಾರ್ದನಸ್ವಾಮಿ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya
error: Content is protected !!