25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

ಬೆಳ್ತಂಗಡಿ: ಮಿತ್ತಬಾಗಿಲು -ಮಲವಂತಿಗೆ ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ನಿರ್ಮಾಣ ಪ್ರಾರಂಭದ ಸಂದರ್ಭ ನಾರಾಯಣ ಗುರುಗಳ ಆಶೀರ್ವಾದದಂತೆ ಅತೀ ಕಡಿಮೆ ಅವಧಿಯಲ್ಲಿ ಅಂದರೆ ಕೇವಲ ನಾಲ್ಕು ತಿಂಗಳ ಒಳಗಾಗಿ ಭವ್ಯ ಮಂದಿರದ ಜೊತೆಗೆ ಗುರು ಭವನ ನಿರ್ಮಾಣ ಆಗಿತ್ತು.

ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕದ ದಿನದಂದು ಕಾಜೂರಿನ ಪದ್ಮಾವತಿಯವರ ಲಕ್ಷಾಂತರ ರೂಪಾಯಿ ಮೌಲ್ಯದ ಎರಡು ಪವನ್ ಮಾಂಗಲ್ಯ ಸರಮಾಲೆ ಕಳೆದುಕೊಂಡು ಬಿಟ್ಟಿದ್ದರು, ಹುಡುಕಾಟ ಕೂಡ ಆ ಸಮಯದಲ್ಲಿ ನಡೆಸಲಾಗಿತ್ತು,ಗುರುಗಳ ಮೌಲ್ಯ ಅರಿತ ಅವರು ಏನಾದರೂ ಮಾಂಗಲ್ಯ ಸರಮಾಲೆ ಸಿಕ್ಕಿದರೆ ಗುರುಪೂಜೆ ಇದೇ ಮಂದಿರದಲ್ಲಿ ನಡೆಸುತ್ತೇನೆ ಎಂದು ಹರಕೆ ಹೊತ್ತುಕೊಂಡಿದ್ದರು.

ಹರಕೆ ಹೊತ್ತ ಫಲವೋ, ಅವರ ಪೂರ್ವ ಜನ್ಮದ ಪುಣ್ಯವೋ ಕಲಶೋತ್ಸವ ಕಳೆದು ಒಂದು ತಿಂಗಳ ಒಳಗಾಗಿ ಅವರ ಮಾಂಗಲ್ಯ ಸರಮಾಲೆ ಯಾವುದೇ ರೀತಿಯಲ್ಲಿ ಕಳೆಗುಂದದೆ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ಆವರಣದಲ್ಲಿ ಸಿಕ್ಕಿದೆ.ಮಾಂಗಲ್ಯ ಸರಮಾಲೆ ಸಿಕ್ಕಿದ ಸಮಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿದ ಸಮಯ ಒಂದೇ ಆಗಿತ್ತು ಎಂದು ಸಂಘದ ಮುಖ್ಯಸ್ಥರಾದ ಸುರೇಂದ್ರ ಕೊಲ್ಲಿ ತಿಳಿಸಿದ್ದಾರೆ.

Related posts

ಕೊಜಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಒಟ್ಲ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚಿತ್ತರಂಜನ್ ಕಂಕನಾಡಿ ದಂಪತಿಗಳಿಂದ ಸಂಕ್ರಮಣ ಪೂಜೆ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

Suddi Udaya

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya
error: Content is protected !!