24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸ್ಟಾರ್ ಲೈನ್ ಶಾಲೆ: ಎಸ್.ಜೆ.ಎಮ್ ರಾಜ್ಯ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ

ಸ್ಟಾರ್ ಲೈನ್ ಅರೆಬಿಕ್ ಮದರಸ ಹಾಗೂ ಸ್ಟಾರ್ ಲೈನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಗೆ
ಫೆ.7 ರಂದು ಸುನ್ನಿ ಜಂಇಯ್ಯತುಲ್ ಮುಅಲ್ಲಿ ಮೀನ್ ಇದರ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ ನೀಡಿದ ಶಾಲೆಯಲ್ಲಿನ ಅರಬಿಕ್ ಶಿಕ್ಷಣ ಚಟುವಟಿಕೆಗಳ ಬಗ್ಗೆ ಚರ್ಚಿಸಿ ಪ್ರಶಂಸೆ ವ್ಯಕ್ತಪಡಿಸಿದರು.

10ನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳು ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಎಸ್ ಎಸ್ ಎಫ್ ಆಯೋಜಿಸಿರುವ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ಭಾಗವಹಿಸಿ ಉರ್ದು ಭಾಷಣದಲ್ಲಿ ಪ್ರಥಮ ಸ್ಥಾನ ಗಳಿಸಿದ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ರವರನ್ನು ಅಭಿನಂದಿಸಿದರು.

ಅಹ್ಲುಸುನ್ನತ್ ವಲ್ ಜಮಾಅತ್ ಇದರ ಆಶಯ ಆದರ್ಶಗಳನ್ನು ಇಸ್ಲಾಂಮಿನ ಚೌಕಟ್ಟಿನಲ್ಲಿ ಮುನ್ನಡೆಸುವಲ್ಲಿ ನೇತೃತ್ವ ವಹಿಸಿಕೊಂಡಿರುವ ಜನಾಬ್ ಸಯ್ಯದ್ ಹಬೀಬ್ ಹಾಜಿ, ಆಡಳಿತ ಟ್ರಸ್ಟ್ , ಹಾಗೂ ಅಧ್ಯಾಪಕ ವೃಂದಕ್ಕೂ, ವಿದ್ಯಾರ್ಥಿಗಳಿಗೂ, ಪೋಷಕರಿಗೂ ಪ್ರತ್ಯೇಕವಾಗಿ ಪ್ರಾರ್ಥನೆ ಮಾಡಿದರು. ಸಂಸ್ಥೆಯ ಪ್ರದಾನ ಕಾರ್ಯದರ್ಶಿ ಸಯ್ಯದ್ ಅಯ್ಯೂಬ್, ಅರಬಿಕ್ ಮುಖ್ಯೋಪಾಧ್ಯಾಯರು ಅಬ್ದುರ್ರಝಾಖ್ ಇಂದಾದಿ ನಾವೂರು ಸಹ ಅಧ್ಯಾಪಕರಾದ, ಮುಹಮ್ಮದ್ ಅಶ್ರಫ್ ಹಿಮಮಿ, ಅಬ್ದುಲ್ ಖಾದರ್ ಮಿಸ್ಬಾಹಿ, ಯಾಕೂಬ್ ಮದನಿ, ಮುಹಮ್ಮದ್ ಮುಸ್ಲಿಯಾರ್, ಉಪಸ್ಥಿತರಿದ್ದರು.

Related posts

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

Suddi Udaya

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಎನ್ .ಎಸ್. ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya
error: Content is protected !!