April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

ಅಳದಂಗಡಿ : ಗಣಪತಿ ಸಾನಿಧ್ಯವುಳ್ಳ ಕಾರಣಿಕ ಕ್ಷೇತ್ರವಾಗಿರುವ ತಾಲೂಕಿನ ಎರಡನೇ ದೇವಸ್ಥಾನವಾದ ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಎರಡನೇ ವರ್ಷದ ಪ್ರತಿಷ್ಠಾ ವರ್ಧಂತಿ ಫೆ. 7 ರಂದು ವಿಜೃಂಭಣೆಯಿದ ನೆರವೇರಿತು.


ಪೊಳಲಿ ಕೋಡಿಮಜಲು ಅನಂತಪದ್ಮನಾಭ ಉಪಾಧ್ಯಾಯ ಅವರ ತಂತ್ರಿವರ್ಯತ್ವದಲ್ಲಿ, ಪ್ರಧಾನ ಅರ್ಚಕ ಸೋಮನಾಥ ಮಯ್ಯ ಅವರ ಉಪಸ್ಥಿತಿಯಲ್ಲಿ ಬೆಳಿಗ್ಗೆ ಮಹಾಗಣಪತಿಗೆ 12 ತೆಂಗಿನಕಾಯಿ ಗಣಹವನ, 25 ಕಲಶಾಭಿಷೇಕ, ಹವನ, ಪ್ರಸನ್ನ ಪೂಜೆ, ಅಪ್ಪ, ಪಂಚಕಜ್ಜಾಯ, ಮಹಾಮಂಗಳಾರತಿ ಸೇವೆಗಳು ನಡೆದವು. ಮಧ್ಯಾಹ್ನ ಭೋಜನ ಪ್ರಸಾದವನ್ನು ನೂರಾರು ಭಕ್ತರು ಸ್ವೀಕರಿಸಿದರು.

ಸಂಜೆ ಶ್ರೀರಂಗ ಪೂಜೆಯು ಸಂಪನ್ನಗೊಂಡಿತು. ಬಳಿಕ ದೇವರ ಬಲಿ ಉತ್ಸವ ಚೆಂಡೆ, ವಾದ್ಯ, ಕೊಂಬು ಇತ್ಯಾದಿ ವಾದನಗಳೊಂದಿಗೆ ನೆರವೇರಿತು. ಉತ್ಸವದ ಸಂದರ್ಭ ಸಾವಿರಾರು ಭಕ್ತ ಬಂಧುಗಳು ಪಾಲ್ಗೊಂಡಿದ್ದರು.
ಸನಿಹದ ಶ್ರೀ ಸೋಮನಾಥೇಶ್ವರೀ ದೇವಿಗೆ ಜನವರಿಯಲ್ಲಿ ನಡೆದ ಬ್ರಹ್ಮಕಲಶೋತ್ಸವದ ಸಂದರ್ಭ ಧರ್ಮಸ್ಥಳ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರು ಶ್ರೀ ಮಹಾಗಣಪತಿ ದೇವಸ್ಥಾನ ಅಭಿವೃದ್ಧಿ ಹೊಂದಿದ ಕುರಿತು ಪ್ರಶಂಸೆ ವ್ಯಕ್ತಪಡಿಸಿದ್ದರು. ಎರಡು ವರ್ಷಗಳ ಹಿಂದೆ ಅವರ ಇಚ್ಛೆಯಂತೆ ಗಣಪತಿ ದೇವರ ಆಕರ್ಷಕ ನೂತನ ಮೂರ್ತಿಯನ್ನು ಸಿದ್ಧಪಡಿಸಿ ಪ್ರತಿಷ್ಠಾಪಿಸಲಾಗಿತ್ತು.


ಅರ್ಚಕ ಪ್ರವೀಣ ಮಯ್ಯ, ಪ್ರಕಾಶ ಹೊಳ್ಳ ಧಾರ್ಮಿಕ ವಿಧಾನಗಳನ್ನು ನೆರವೇರಿಸಿದರು. ಆಡಳಿತಾಧಿಕಾರಿ ಅಳದಂಗಡಿಯ ಪಶುವೈದ್ಯ ಪರಿವೀಕ್ಷಕ ರಮೇಶ್ ಉಪಸ್ಥಿತರಿದ್ದರು.

Related posts

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2025

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ “ಜನ ಸ್ಪಂದನ ಕಾರ್ಯಕ್ರಮ ಮುಂದೂಡಿಕೆ

Suddi Udaya

ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬ, 75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು: ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ: ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya
error: Content is protected !!