July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

ಅಳದಂಗಡಿ : ಗಣಪತಿ ಸಾನಿಧ್ಯವುಳ್ಳ ಕಾರಣಿಕ ಕ್ಷೇತ್ರವಾಗಿರುವ ತಾಲೂಕಿನ ಎರಡನೇ ದೇವಸ್ಥಾನವಾದ ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಎರಡನೇ ವರ್ಷದ ಪ್ರತಿಷ್ಠಾ ವರ್ಧಂತಿ ಫೆ. 7 ರಂದು ವಿಜೃಂಭಣೆಯಿದ ನೆರವೇರಿತು.


ಪೊಳಲಿ ಕೋಡಿಮಜಲು ಅನಂತಪದ್ಮನಾಭ ಉಪಾಧ್ಯಾಯ ಅವರ ತಂತ್ರಿವರ್ಯತ್ವದಲ್ಲಿ, ಪ್ರಧಾನ ಅರ್ಚಕ ಸೋಮನಾಥ ಮಯ್ಯ ಅವರ ಉಪಸ್ಥಿತಿಯಲ್ಲಿ ಬೆಳಿಗ್ಗೆ ಮಹಾಗಣಪತಿಗೆ 12 ತೆಂಗಿನಕಾಯಿ ಗಣಹವನ, 25 ಕಲಶಾಭಿಷೇಕ, ಹವನ, ಪ್ರಸನ್ನ ಪೂಜೆ, ಅಪ್ಪ, ಪಂಚಕಜ್ಜಾಯ, ಮಹಾಮಂಗಳಾರತಿ ಸೇವೆಗಳು ನಡೆದವು. ಮಧ್ಯಾಹ್ನ ಭೋಜನ ಪ್ರಸಾದವನ್ನು ನೂರಾರು ಭಕ್ತರು ಸ್ವೀಕರಿಸಿದರು.

ಸಂಜೆ ಶ್ರೀರಂಗ ಪೂಜೆಯು ಸಂಪನ್ನಗೊಂಡಿತು. ಬಳಿಕ ದೇವರ ಬಲಿ ಉತ್ಸವ ಚೆಂಡೆ, ವಾದ್ಯ, ಕೊಂಬು ಇತ್ಯಾದಿ ವಾದನಗಳೊಂದಿಗೆ ನೆರವೇರಿತು. ಉತ್ಸವದ ಸಂದರ್ಭ ಸಾವಿರಾರು ಭಕ್ತ ಬಂಧುಗಳು ಪಾಲ್ಗೊಂಡಿದ್ದರು.
ಸನಿಹದ ಶ್ರೀ ಸೋಮನಾಥೇಶ್ವರೀ ದೇವಿಗೆ ಜನವರಿಯಲ್ಲಿ ನಡೆದ ಬ್ರಹ್ಮಕಲಶೋತ್ಸವದ ಸಂದರ್ಭ ಧರ್ಮಸ್ಥಳ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರು ಶ್ರೀ ಮಹಾಗಣಪತಿ ದೇವಸ್ಥಾನ ಅಭಿವೃದ್ಧಿ ಹೊಂದಿದ ಕುರಿತು ಪ್ರಶಂಸೆ ವ್ಯಕ್ತಪಡಿಸಿದ್ದರು. ಎರಡು ವರ್ಷಗಳ ಹಿಂದೆ ಅವರ ಇಚ್ಛೆಯಂತೆ ಗಣಪತಿ ದೇವರ ಆಕರ್ಷಕ ನೂತನ ಮೂರ್ತಿಯನ್ನು ಸಿದ್ಧಪಡಿಸಿ ಪ್ರತಿಷ್ಠಾಪಿಸಲಾಗಿತ್ತು.


ಅರ್ಚಕ ಪ್ರವೀಣ ಮಯ್ಯ, ಪ್ರಕಾಶ ಹೊಳ್ಳ ಧಾರ್ಮಿಕ ವಿಧಾನಗಳನ್ನು ನೆರವೇರಿಸಿದರು. ಆಡಳಿತಾಧಿಕಾರಿ ಅಳದಂಗಡಿಯ ಪಶುವೈದ್ಯ ಪರಿವೀಕ್ಷಕ ರಮೇಶ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ವಳಂಬ್ರ ಕುಟುಂಬಸ್ಥ ಅಮೇರಿಕ ಮೂಲದ ಹೆಸರಾಂತ ವೈದ್ಯ ಡಾ. ರಾಮಯ್ಯ ಗೌಡ ದಂಪತಿಗೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಿಂದ ಈದ್ ಮಿಲಾದ್ ರ್‍ಯಾಲಿ

Suddi Udaya

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya

ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್

Suddi Udaya
error: Content is protected !!