September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

ಅಳದಂಗಡಿ : ಗಣಪತಿ ಸಾನಿಧ್ಯವುಳ್ಳ ಕಾರಣಿಕ ಕ್ಷೇತ್ರವಾಗಿರುವ ತಾಲೂಕಿನ ಎರಡನೇ ದೇವಸ್ಥಾನವಾದ ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಎರಡನೇ ವರ್ಷದ ಪ್ರತಿಷ್ಠಾ ವರ್ಧಂತಿ ಫೆ. 7 ರಂದು ವಿಜೃಂಭಣೆಯಿದ ನೆರವೇರಿತು.


ಪೊಳಲಿ ಕೋಡಿಮಜಲು ಅನಂತಪದ್ಮನಾಭ ಉಪಾಧ್ಯಾಯ ಅವರ ತಂತ್ರಿವರ್ಯತ್ವದಲ್ಲಿ, ಪ್ರಧಾನ ಅರ್ಚಕ ಸೋಮನಾಥ ಮಯ್ಯ ಅವರ ಉಪಸ್ಥಿತಿಯಲ್ಲಿ ಬೆಳಿಗ್ಗೆ ಮಹಾಗಣಪತಿಗೆ 12 ತೆಂಗಿನಕಾಯಿ ಗಣಹವನ, 25 ಕಲಶಾಭಿಷೇಕ, ಹವನ, ಪ್ರಸನ್ನ ಪೂಜೆ, ಅಪ್ಪ, ಪಂಚಕಜ್ಜಾಯ, ಮಹಾಮಂಗಳಾರತಿ ಸೇವೆಗಳು ನಡೆದವು. ಮಧ್ಯಾಹ್ನ ಭೋಜನ ಪ್ರಸಾದವನ್ನು ನೂರಾರು ಭಕ್ತರು ಸ್ವೀಕರಿಸಿದರು.

ಸಂಜೆ ಶ್ರೀರಂಗ ಪೂಜೆಯು ಸಂಪನ್ನಗೊಂಡಿತು. ಬಳಿಕ ದೇವರ ಬಲಿ ಉತ್ಸವ ಚೆಂಡೆ, ವಾದ್ಯ, ಕೊಂಬು ಇತ್ಯಾದಿ ವಾದನಗಳೊಂದಿಗೆ ನೆರವೇರಿತು. ಉತ್ಸವದ ಸಂದರ್ಭ ಸಾವಿರಾರು ಭಕ್ತ ಬಂಧುಗಳು ಪಾಲ್ಗೊಂಡಿದ್ದರು.
ಸನಿಹದ ಶ್ರೀ ಸೋಮನಾಥೇಶ್ವರೀ ದೇವಿಗೆ ಜನವರಿಯಲ್ಲಿ ನಡೆದ ಬ್ರಹ್ಮಕಲಶೋತ್ಸವದ ಸಂದರ್ಭ ಧರ್ಮಸ್ಥಳ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರು ಶ್ರೀ ಮಹಾಗಣಪತಿ ದೇವಸ್ಥಾನ ಅಭಿವೃದ್ಧಿ ಹೊಂದಿದ ಕುರಿತು ಪ್ರಶಂಸೆ ವ್ಯಕ್ತಪಡಿಸಿದ್ದರು. ಎರಡು ವರ್ಷಗಳ ಹಿಂದೆ ಅವರ ಇಚ್ಛೆಯಂತೆ ಗಣಪತಿ ದೇವರ ಆಕರ್ಷಕ ನೂತನ ಮೂರ್ತಿಯನ್ನು ಸಿದ್ಧಪಡಿಸಿ ಪ್ರತಿಷ್ಠಾಪಿಸಲಾಗಿತ್ತು.


ಅರ್ಚಕ ಪ್ರವೀಣ ಮಯ್ಯ, ಪ್ರಕಾಶ ಹೊಳ್ಳ ಧಾರ್ಮಿಕ ವಿಧಾನಗಳನ್ನು ನೆರವೇರಿಸಿದರು. ಆಡಳಿತಾಧಿಕಾರಿ ಅಳದಂಗಡಿಯ ಪಶುವೈದ್ಯ ಪರಿವೀಕ್ಷಕ ರಮೇಶ್ ಉಪಸ್ಥಿತರಿದ್ದರು.

Related posts

ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ. ಶಿವಪ್ರಸಾದ್ ಶೆಟ್ಟಿಆಯ್ಕೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮಂಜ ಸರಕಾರಿ ಹಿ.ಪ್ರಾ. ಶಾಲೆಯ ಆಟದ ಮೈದಾನ

Suddi Udaya

ಕೊಕ್ಕಡ: ತಿಪ್ಪಮಾಜಲ್ ಮೇರಿ ವರ್ಗಿಸ್ ರವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿ

Suddi Udaya

ಉಜಿರೆ: ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

Suddi Udaya
error: Content is protected !!