March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

ಬೆಳ್ತಂಗಡಿ: ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳು ಅಥವಾ ಇತರ ಸಿಬ್ಬಂದಿಗಳು ಇರುವುದು ಸಾಮಾನ್ಯ ಆದರೆ ಇಂದಬೆಟ್ಟು ಪ್ರಾಥಮಿಕ ಆಸ್ಪತ್ರೆಯಲ್ಲಿ ಫೆ.8ರಂದು ಸಂಜೆ 5.30ರಿಂದ ಯಾರೂ ಇಲ್ಲದೆ, ಬಾಗಿಲನ್ನು ಹಾಕದೆ ಸಿಬ್ಬಂದಿಗಳು ಹೋಗಿರುವುದು ಕಂಡು ಬಂದಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 7 ಗಂಟೆ ತನಕ ಆಸ್ಪತ್ರೆಗಳು ಓಪನ್ ಆಗಿರುತ್ತದೆ. ಅಗತ್ಯವಿದ್ದವರು ಜೌಷಧಿಗಾಗಿ ಬರುತ್ತಿರುತ್ತಾರೆ. ನಂತರ ಹೆಚ್ಚಿನ ಕಡೆ ಬಾಗಿಲು ಹಾಕಿ ಸಿಬ್ಬಂದಿಗಳು ತೆರಳುತ್ತಾರೆ. ಆದರೆ ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಂದು ಸಂಜೆ 5.30ಕ್ಕೆ ಸ್ಥಳೀಯರು ಹೋಗಿದ್ದು, ಅವರಿಗೆ ಅಚ್ಚರಿ ಕಾದಿತ್ತು. ಆಸ್ಪತ್ರೆ ಓಪನ್ ಆಗಿತ್ತು. ಆದರೆ ಒಳಗೆ ಯಾರೂ ಇರಲಿಲ್ಲ. ವೈದ್ಯರು, ನರ್ಸ್‌ಗಳು, ಸಿಬ್ಬಂದಿಗಳು ಯಾರು ಇಲ್ಲದೆ ಸ್ಥಳೀಯರು ಸಂಬಂಧ ಪಟ್ಟವರಿಗೆ ಮಾಹಿತಿ ನೀಡಲು ಮೊಬೈಲ್ ಕರೆ ಮಾಡಿದರೂ ಅವರು ಸ್ವೀಕರಿಸಲಿಲ್ಲ. ಆಸ್ಪತ್ರೆಗೆ ಬಾಗಿಲನ್ನು ಹಾಕದೆ ಹೋಗಿರುವುದು ಸ್ಥಳೀಯರಿಗೆ ಆಶ್ಚರ್ಯವನ್ನು ತಂದಿದೆ.

Related posts

ತಾಲೂಕು ಮಟ್ಟದ ಕರಾಟೆ ಪಂದ್ಯಾಟ: ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya

ತೆಂಕಕಾರಂದೂರು ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಮುಂಡಾಜೆ : ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!