19.5 C
ಪುತ್ತೂರು, ಬೆಳ್ತಂಗಡಿ
February 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

ಬೆಳ್ತಂಗಡಿ: ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳು ಅಥವಾ ಇತರ ಸಿಬ್ಬಂದಿಗಳು ಇರುವುದು ಸಾಮಾನ್ಯ ಆದರೆ ಇಂದಬೆಟ್ಟು ಪ್ರಾಥಮಿಕ ಆಸ್ಪತ್ರೆಯಲ್ಲಿ ಫೆ.8ರಂದು ಸಂಜೆ 5.30ರಿಂದ ಯಾರೂ ಇಲ್ಲದೆ, ಬಾಗಿಲನ್ನು ಹಾಕದೆ ಸಿಬ್ಬಂದಿಗಳು ಹೋಗಿರುವುದು ಕಂಡು ಬಂದಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 7 ಗಂಟೆ ತನಕ ಆಸ್ಪತ್ರೆಗಳು ಓಪನ್ ಆಗಿರುತ್ತದೆ. ಅಗತ್ಯವಿದ್ದವರು ಜೌಷಧಿಗಾಗಿ ಬರುತ್ತಿರುತ್ತಾರೆ. ನಂತರ ಹೆಚ್ಚಿನ ಕಡೆ ಬಾಗಿಲು ಹಾಕಿ ಸಿಬ್ಬಂದಿಗಳು ತೆರಳುತ್ತಾರೆ. ಆದರೆ ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಂದು ಸಂಜೆ 5.30ಕ್ಕೆ ಸ್ಥಳೀಯರು ಹೋಗಿದ್ದು, ಅವರಿಗೆ ಅಚ್ಚರಿ ಕಾದಿತ್ತು. ಆಸ್ಪತ್ರೆ ಓಪನ್ ಆಗಿತ್ತು. ಆದರೆ ಒಳಗೆ ಯಾರೂ ಇರಲಿಲ್ಲ. ವೈದ್ಯರು, ನರ್ಸ್‌ಗಳು, ಸಿಬ್ಬಂದಿಗಳು ಯಾರು ಇಲ್ಲದೆ ಸ್ಥಳೀಯರು ಸಂಬಂಧ ಪಟ್ಟವರಿಗೆ ಮಾಹಿತಿ ನೀಡಲು ಮೊಬೈಲ್ ಕರೆ ಮಾಡಿದರೂ ಅವರು ಸ್ವೀಕರಿಸಲಿಲ್ಲ. ಆಸ್ಪತ್ರೆಗೆ ಬಾಗಿಲನ್ನು ಹಾಕದೆ ಹೋಗಿರುವುದು ಸ್ಥಳೀಯರಿಗೆ ಆಶ್ಚರ್ಯವನ್ನು ತಂದಿದೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಪ್ರಕೃತಿ ವಿಕೋಪಕ್ಕೆ ಹಾನಿಯಾಗಿರುವ ಮನೆಗಳಿಗೆ ಭೇಟಿ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ತಾಲೂಕು ಹಬ್ಬಗಳ ಆಚರಣೆ ಸಮಿತಿಯಿಂದ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ವ್ಯಕ್ತಿತ್ವ ವಿಕಸನದ ಕಾರ್ಯಾಗಾರ

Suddi Udaya

ಸೆ.30: ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯಿಂದ 48 ಗ್ರಾ. ಪಂ. ಪಶುಸಖಿಯವರಿಗೆ ಉಚಿತವಾಗಿ ಕಿಟ್ ವಿತರಣೆ

Suddi Udaya
error: Content is protected !!