July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

ಬೆಳ್ತಂಗಡಿ: ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳು ಅಥವಾ ಇತರ ಸಿಬ್ಬಂದಿಗಳು ಇರುವುದು ಸಾಮಾನ್ಯ ಆದರೆ ಇಂದಬೆಟ್ಟು ಪ್ರಾಥಮಿಕ ಆಸ್ಪತ್ರೆಯಲ್ಲಿ ಫೆ.8ರಂದು ಸಂಜೆ 5.30ರಿಂದ ಯಾರೂ ಇಲ್ಲದೆ, ಬಾಗಿಲನ್ನು ಹಾಕದೆ ಸಿಬ್ಬಂದಿಗಳು ಹೋಗಿರುವುದು ಕಂಡು ಬಂದಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 7 ಗಂಟೆ ತನಕ ಆಸ್ಪತ್ರೆಗಳು ಓಪನ್ ಆಗಿರುತ್ತದೆ. ಅಗತ್ಯವಿದ್ದವರು ಜೌಷಧಿಗಾಗಿ ಬರುತ್ತಿರುತ್ತಾರೆ. ನಂತರ ಹೆಚ್ಚಿನ ಕಡೆ ಬಾಗಿಲು ಹಾಕಿ ಸಿಬ್ಬಂದಿಗಳು ತೆರಳುತ್ತಾರೆ. ಆದರೆ ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಂದು ಸಂಜೆ 5.30ಕ್ಕೆ ಸ್ಥಳೀಯರು ಹೋಗಿದ್ದು, ಅವರಿಗೆ ಅಚ್ಚರಿ ಕಾದಿತ್ತು. ಆಸ್ಪತ್ರೆ ಓಪನ್ ಆಗಿತ್ತು. ಆದರೆ ಒಳಗೆ ಯಾರೂ ಇರಲಿಲ್ಲ. ವೈದ್ಯರು, ನರ್ಸ್‌ಗಳು, ಸಿಬ್ಬಂದಿಗಳು ಯಾರು ಇಲ್ಲದೆ ಸ್ಥಳೀಯರು ಸಂಬಂಧ ಪಟ್ಟವರಿಗೆ ಮಾಹಿತಿ ನೀಡಲು ಮೊಬೈಲ್ ಕರೆ ಮಾಡಿದರೂ ಅವರು ಸ್ವೀಕರಿಸಲಿಲ್ಲ. ಆಸ್ಪತ್ರೆಗೆ ಬಾಗಿಲನ್ನು ಹಾಕದೆ ಹೋಗಿರುವುದು ಸ್ಥಳೀಯರಿಗೆ ಆಶ್ಚರ್ಯವನ್ನು ತಂದಿದೆ.

Related posts

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ಅತಿಥಿ ಉಪನ್ಯಾಸ: ಸೃಷ್ಟಿಕರ್ತ ಆರ್ಥಿಕತೆ ಮತ್ತು ಕೃತಕ ಬುದ್ಧಿಮತ್ತೆ ಕುರಿತು ಚರ್ಚೆ

Suddi Udaya

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya
error: Content is protected !!