April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಕಾಡು ಹಂದಿ ಬೇಟೆ: ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಕಾಡುಹಂದಿಯನ್ನು ಯಾವುದೋ ಆಯುಧಗಳಿಂದ ದಾಳಿ ಮಾಡಿದ ಪ್ರಕರಣ ಸಂಬಂಧ ವೈದ್ಯರ ವರದಿ ಮೇರೆಗೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಮಿತ್ತಬಾಗಿಲು ಗ್ರಾಮದ ಹೊಸಬೆಟ್ಟು ನಿವಾಸಿ ಬಾಬು ಗೌಡರ ತೋಟದಲ್ಲಿ ಒಂದು ವರ್ಷ ಪ್ರಾಯದ 26 ಕೆ‌.ಜಿ ತೂಕದ ಹೆಣ್ಣು ಕಾಡುಹಂದಿಯನ್ನು ಜ.23 ರಂದು ಜಾನು ಗೌಡ ಎಂಬಾತ ಆಯುಧದಿಂದ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದು. ಈ ಘಟನೆ ಬಗ್ಗೆ ಸ್ಥಳೀಯರು ಬೆಳ್ತಂಗಡಿ ಅರಣ್ಯ ಇಲಾಖೆಗೆ ದೂರು ನೀಡಿದ್ದರು.

ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್.ಎಫ್.ಓ ತ್ಯಾಗರಾಜ್ ಮತ್ತು ತಂಡ ಜ.23 ರಂದು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ ಬೆಳ್ತಂಗಡಿ ಗೋ ಮತ್ತು ಪಶು ಇಲಾಖೆಯ ವೈದ್ಯರಿಂದ ಶವ ಪರೀಕ್ಷೆ ಮಾಡಿಸಿ ಯಾವ ವಸ್ತುವಿನಿಂದ ಗಾಯಗೊಳಿಸಿ ಸಾಯಿಸಲಾಗಿದೆ ಎಂದು ವರದಿ ಕೇಳಿದ್ದರು. ಈ ಬಗ್ಗೆ ಪಶು ವೈದ್ಯರು ಜ.26 ರಂದು ಅಯುಧದಿಂದ ಗಾಯಗೊಳಿಸಿ ಸಾಯಿಸಿರುವುದಾಗಿ ವರದಿ ನೀಡಿದ್ದು ಅದರಂತೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಆರೋಪಿ ಮಿತ್ತಬಾಗಿಲು ಗ್ರಾಮದ ಹೊಸಬೆಟ್ಟು ನಿವಾಸಿ ಬಾಬು ಗೌಡರ ಮಗ ಜಾನು ಗೌಡ ವಿರುದ್ಧ ಜ.27 ರಂದು ಅರಣ್ಯ ಕಾಯ್ದೆ 9,39,51 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ರಾಜ್ಯ ಮಟ್ಟದ ಜಾನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಪ್ರಥಮ

Suddi Udaya

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಸೆ.16: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಮದ್ದಡ್ಕ: ಸಬರಬೈಲುನಲ್ಲಿ ಹೊಂಡಕ್ಕೆ ಬಿದ್ದ ಲಾರಿ‌

Suddi Udaya
error: Content is protected !!