July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಕಾಡು ಹಂದಿ ಬೇಟೆ: ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಕಾಡುಹಂದಿಯನ್ನು ಯಾವುದೋ ಆಯುಧಗಳಿಂದ ದಾಳಿ ಮಾಡಿದ ಪ್ರಕರಣ ಸಂಬಂಧ ವೈದ್ಯರ ವರದಿ ಮೇರೆಗೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಮಿತ್ತಬಾಗಿಲು ಗ್ರಾಮದ ಹೊಸಬೆಟ್ಟು ನಿವಾಸಿ ಬಾಬು ಗೌಡರ ತೋಟದಲ್ಲಿ ಒಂದು ವರ್ಷ ಪ್ರಾಯದ 26 ಕೆ‌.ಜಿ ತೂಕದ ಹೆಣ್ಣು ಕಾಡುಹಂದಿಯನ್ನು ಜ.23 ರಂದು ಜಾನು ಗೌಡ ಎಂಬಾತ ಆಯುಧದಿಂದ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದು. ಈ ಘಟನೆ ಬಗ್ಗೆ ಸ್ಥಳೀಯರು ಬೆಳ್ತಂಗಡಿ ಅರಣ್ಯ ಇಲಾಖೆಗೆ ದೂರು ನೀಡಿದ್ದರು.

ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್.ಎಫ್.ಓ ತ್ಯಾಗರಾಜ್ ಮತ್ತು ತಂಡ ಜ.23 ರಂದು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ ಬೆಳ್ತಂಗಡಿ ಗೋ ಮತ್ತು ಪಶು ಇಲಾಖೆಯ ವೈದ್ಯರಿಂದ ಶವ ಪರೀಕ್ಷೆ ಮಾಡಿಸಿ ಯಾವ ವಸ್ತುವಿನಿಂದ ಗಾಯಗೊಳಿಸಿ ಸಾಯಿಸಲಾಗಿದೆ ಎಂದು ವರದಿ ಕೇಳಿದ್ದರು. ಈ ಬಗ್ಗೆ ಪಶು ವೈದ್ಯರು ಜ.26 ರಂದು ಅಯುಧದಿಂದ ಗಾಯಗೊಳಿಸಿ ಸಾಯಿಸಿರುವುದಾಗಿ ವರದಿ ನೀಡಿದ್ದು ಅದರಂತೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಆರೋಪಿ ಮಿತ್ತಬಾಗಿಲು ಗ್ರಾಮದ ಹೊಸಬೆಟ್ಟು ನಿವಾಸಿ ಬಾಬು ಗೌಡರ ಮಗ ಜಾನು ಗೌಡ ವಿರುದ್ಧ ಜ.27 ರಂದು ಅರಣ್ಯ ಕಾಯ್ದೆ 9,39,51 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಕೊಕ್ಕಡ: ನೂತನ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಉದ್ಘಾಟನೆ

Suddi Udaya

ಲೋಕೋಪಯೋಗಿ ಸಚಿವ ಜಾರಕಿಹೊಳಿ ಇಂದು ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಧಮ೯ಸ್ಥಳ: ದೂರುದಾರನ ಜೊತೆ ಬೊಳಿಯಾರ್ ನ ಹೊಸ ಜಾಗಕ್ಕೆ ಬಂದ ಎಸ್ ಐಟಿ ತಂಡ

Suddi Udaya

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್‌, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ

Suddi Udaya

ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾಗಿ ಯತೀಶ್ ಧರ್ಮಸ್ಥಳ ಆಯ್ಕೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!