23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಕಾಡು ಹಂದಿ ಬೇಟೆ: ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಕಾಡುಹಂದಿಯನ್ನು ಯಾವುದೋ ಆಯುಧಗಳಿಂದ ದಾಳಿ ಮಾಡಿದ ಪ್ರಕರಣ ಸಂಬಂಧ ವೈದ್ಯರ ವರದಿ ಮೇರೆಗೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಮಿತ್ತಬಾಗಿಲು ಗ್ರಾಮದ ಹೊಸಬೆಟ್ಟು ನಿವಾಸಿ ಬಾಬು ಗೌಡರ ತೋಟದಲ್ಲಿ ಒಂದು ವರ್ಷ ಪ್ರಾಯದ 26 ಕೆ‌.ಜಿ ತೂಕದ ಹೆಣ್ಣು ಕಾಡುಹಂದಿಯನ್ನು ಜ.23 ರಂದು ಜಾನು ಗೌಡ ಎಂಬಾತ ಆಯುಧದಿಂದ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದು. ಈ ಘಟನೆ ಬಗ್ಗೆ ಸ್ಥಳೀಯರು ಬೆಳ್ತಂಗಡಿ ಅರಣ್ಯ ಇಲಾಖೆಗೆ ದೂರು ನೀಡಿದ್ದರು.

ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್.ಎಫ್.ಓ ತ್ಯಾಗರಾಜ್ ಮತ್ತು ತಂಡ ಜ.23 ರಂದು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ ಬೆಳ್ತಂಗಡಿ ಗೋ ಮತ್ತು ಪಶು ಇಲಾಖೆಯ ವೈದ್ಯರಿಂದ ಶವ ಪರೀಕ್ಷೆ ಮಾಡಿಸಿ ಯಾವ ವಸ್ತುವಿನಿಂದ ಗಾಯಗೊಳಿಸಿ ಸಾಯಿಸಲಾಗಿದೆ ಎಂದು ವರದಿ ಕೇಳಿದ್ದರು. ಈ ಬಗ್ಗೆ ಪಶು ವೈದ್ಯರು ಜ.26 ರಂದು ಅಯುಧದಿಂದ ಗಾಯಗೊಳಿಸಿ ಸಾಯಿಸಿರುವುದಾಗಿ ವರದಿ ನೀಡಿದ್ದು ಅದರಂತೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಆರೋಪಿ ಮಿತ್ತಬಾಗಿಲು ಗ್ರಾಮದ ಹೊಸಬೆಟ್ಟು ನಿವಾಸಿ ಬಾಬು ಗೌಡರ ಮಗ ಜಾನು ಗೌಡ ವಿರುದ್ಧ ಜ.27 ರಂದು ಅರಣ್ಯ ಕಾಯ್ದೆ 9,39,51 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಧರ್ಮಸ್ಥಳವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಸಮಾಲೋಚನ ಸಭೆ

Suddi Udaya

ಎಂ ನಾರಾಯಣ ಬೇಗೂರ್ ರವರಿಗೆ ಶ್ರೀ ರಾಘವೇಂದ್ರ ಮಠದಲ್ಲಿ ಅಭಿನಂದನೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಮಂಗಳೂರು ಸಂಸದ ಬ್ರಿಜೇಶ್ ಚೌಟ ಹಾಗೂ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರ ಅಧ್ಯಕ್ಷ ಚಿತ್ತರಂಜನ್

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya

ಮಚ್ಚಿನ : ಶ್ರೀ ಕ್ಷೇ. ಧ.ಗ್ರಾ, ಯೋಜನೆಯಿಂದ ಆರ್ಥಿಕ ಸಹಾಯಧನ ಹಸ್ತಾಂತರ

Suddi Udaya

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

Suddi Udaya
error: Content is protected !!