September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಕಾಡು ಹಂದಿ ಬೇಟೆ: ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಕಾಡುಹಂದಿಯನ್ನು ಯಾವುದೋ ಆಯುಧಗಳಿಂದ ದಾಳಿ ಮಾಡಿದ ಪ್ರಕರಣ ಸಂಬಂಧ ವೈದ್ಯರ ವರದಿ ಮೇರೆಗೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಮಿತ್ತಬಾಗಿಲು ಗ್ರಾಮದ ಹೊಸಬೆಟ್ಟು ನಿವಾಸಿ ಬಾಬು ಗೌಡರ ತೋಟದಲ್ಲಿ ಒಂದು ವರ್ಷ ಪ್ರಾಯದ 26 ಕೆ‌.ಜಿ ತೂಕದ ಹೆಣ್ಣು ಕಾಡುಹಂದಿಯನ್ನು ಜ.23 ರಂದು ಜಾನು ಗೌಡ ಎಂಬಾತ ಆಯುಧದಿಂದ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದು. ಈ ಘಟನೆ ಬಗ್ಗೆ ಸ್ಥಳೀಯರು ಬೆಳ್ತಂಗಡಿ ಅರಣ್ಯ ಇಲಾಖೆಗೆ ದೂರು ನೀಡಿದ್ದರು.

ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್.ಎಫ್.ಓ ತ್ಯಾಗರಾಜ್ ಮತ್ತು ತಂಡ ಜ.23 ರಂದು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ ಬೆಳ್ತಂಗಡಿ ಗೋ ಮತ್ತು ಪಶು ಇಲಾಖೆಯ ವೈದ್ಯರಿಂದ ಶವ ಪರೀಕ್ಷೆ ಮಾಡಿಸಿ ಯಾವ ವಸ್ತುವಿನಿಂದ ಗಾಯಗೊಳಿಸಿ ಸಾಯಿಸಲಾಗಿದೆ ಎಂದು ವರದಿ ಕೇಳಿದ್ದರು. ಈ ಬಗ್ಗೆ ಪಶು ವೈದ್ಯರು ಜ.26 ರಂದು ಅಯುಧದಿಂದ ಗಾಯಗೊಳಿಸಿ ಸಾಯಿಸಿರುವುದಾಗಿ ವರದಿ ನೀಡಿದ್ದು ಅದರಂತೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಆರೋಪಿ ಮಿತ್ತಬಾಗಿಲು ಗ್ರಾಮದ ಹೊಸಬೆಟ್ಟು ನಿವಾಸಿ ಬಾಬು ಗೌಡರ ಮಗ ಜಾನು ಗೌಡ ವಿರುದ್ಧ ಜ.27 ರಂದು ಅರಣ್ಯ ಕಾಯ್ದೆ 9,39,51 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಬೆಳಾಲು ಶ್ರೀಧ.ಮ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ್ ಬಿ. ಕೌಡಂಗೆ

Suddi Udaya

ಲಾಯಿಲ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಮೂರ್ಜೆ ವಿವೇಕಾನಂದ ಪ್ರಭು

Suddi Udaya

ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ

Suddi Udaya

ಪಿಲ್ಯ ಗ್ರಾಮದಲ್ಲಿ ಕಲ್ಲಿನ ಗಣಿಗಾರಿಕೆ: ಬರಾಯಕೆರೆಗೆಹಾನಿ- ಸಾರ್ವಜನಿಕರಿಗೆ ತೊಂದರೆ, ಬರಾಯಕೆರೆ ಸಂರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ದೂರು

Suddi Udaya
error: Content is protected !!