22.5 C
ಪುತ್ತೂರು, ಬೆಳ್ತಂಗಡಿ
February 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

ಅಳದಂಗಡಿ : ಗಣಪತಿ ಸಾನಿಧ್ಯವುಳ್ಳ ಕಾರಣಿಕ ಕ್ಷೇತ್ರವಾಗಿರುವ ತಾಲೂಕಿನ ಎರಡನೇ ದೇವಸ್ಥಾನವಾದ ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಎರಡನೇ ವರ್ಷದ ಪ್ರತಿಷ್ಠಾ ವರ್ಧಂತಿ ಫೆ. 7 ರಂದು ವಿಜೃಂಭಣೆಯಿದ ನೆರವೇರಿತು.


ಪೊಳಲಿ ಕೋಡಿಮಜಲು ಅನಂತಪದ್ಮನಾಭ ಉಪಾಧ್ಯಾಯ ಅವರ ತಂತ್ರಿವರ್ಯತ್ವದಲ್ಲಿ, ಪ್ರಧಾನ ಅರ್ಚಕ ಸೋಮನಾಥ ಮಯ್ಯ ಅವರ ಉಪಸ್ಥಿತಿಯಲ್ಲಿ ಬೆಳಿಗ್ಗೆ ಮಹಾಗಣಪತಿಗೆ 12 ತೆಂಗಿನಕಾಯಿ ಗಣಹವನ, 25 ಕಲಶಾಭಿಷೇಕ, ಹವನ, ಪ್ರಸನ್ನ ಪೂಜೆ, ಅಪ್ಪ, ಪಂಚಕಜ್ಜಾಯ, ಮಹಾಮಂಗಳಾರತಿ ಸೇವೆಗಳು ನಡೆದವು. ಮಧ್ಯಾಹ್ನ ಭೋಜನ ಪ್ರಸಾದವನ್ನು ನೂರಾರು ಭಕ್ತರು ಸ್ವೀಕರಿಸಿದರು.

ಸಂಜೆ ಶ್ರೀರಂಗ ಪೂಜೆಯು ಸಂಪನ್ನಗೊಂಡಿತು. ಬಳಿಕ ದೇವರ ಬಲಿ ಉತ್ಸವ ಚೆಂಡೆ, ವಾದ್ಯ, ಕೊಂಬು ಇತ್ಯಾದಿ ವಾದನಗಳೊಂದಿಗೆ ನೆರವೇರಿತು. ಉತ್ಸವದ ಸಂದರ್ಭ ಸಾವಿರಾರು ಭಕ್ತ ಬಂಧುಗಳು ಪಾಲ್ಗೊಂಡಿದ್ದರು.
ಸನಿಹದ ಶ್ರೀ ಸೋಮನಾಥೇಶ್ವರೀ ದೇವಿಗೆ ಜನವರಿಯಲ್ಲಿ ನಡೆದ ಬ್ರಹ್ಮಕಲಶೋತ್ಸವದ ಸಂದರ್ಭ ಧರ್ಮಸ್ಥಳ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರು ಶ್ರೀ ಮಹಾಗಣಪತಿ ದೇವಸ್ಥಾನ ಅಭಿವೃದ್ಧಿ ಹೊಂದಿದ ಕುರಿತು ಪ್ರಶಂಸೆ ವ್ಯಕ್ತಪಡಿಸಿದ್ದರು. ಎರಡು ವರ್ಷಗಳ ಹಿಂದೆ ಅವರ ಇಚ್ಛೆಯಂತೆ ಗಣಪತಿ ದೇವರ ಆಕರ್ಷಕ ನೂತನ ಮೂರ್ತಿಯನ್ನು ಸಿದ್ಧಪಡಿಸಿ ಪ್ರತಿಷ್ಠಾಪಿಸಲಾಗಿತ್ತು.


ಅರ್ಚಕ ಪ್ರವೀಣ ಮಯ್ಯ, ಪ್ರಕಾಶ ಹೊಳ್ಳ ಧಾರ್ಮಿಕ ವಿಧಾನಗಳನ್ನು ನೆರವೇರಿಸಿದರು. ಆಡಳಿತಾಧಿಕಾರಿ ಅಳದಂಗಡಿಯ ಪಶುವೈದ್ಯ ಪರಿವೀಕ್ಷಕ ರಮೇಶ್ ಉಪಸ್ಥಿತರಿದ್ದರು.

Related posts

ಜಿಯೋ ಭಾರತ್ 4g ಮೊಬೈಲ್ ಕೇವಲ 999 ಕ್ಕೆ

Suddi Udaya

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಕಕ್ಕಿಂಜೆ: ಕತ್ತರಿಗುಡ್ಡೆ ನಿವಾಸಿ ಉಮರ್ ನಿಧನ

Suddi Udaya
error: Content is protected !!