25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

ಅಳದಂಗಡಿ : ಗಣಪತಿ ಸಾನಿಧ್ಯವುಳ್ಳ ಕಾರಣಿಕ ಕ್ಷೇತ್ರವಾಗಿರುವ ತಾಲೂಕಿನ ಎರಡನೇ ದೇವಸ್ಥಾನವಾದ ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಎರಡನೇ ವರ್ಷದ ಪ್ರತಿಷ್ಠಾ ವರ್ಧಂತಿ ಫೆ. 7 ರಂದು ವಿಜೃಂಭಣೆಯಿದ ನೆರವೇರಿತು.


ಪೊಳಲಿ ಕೋಡಿಮಜಲು ಅನಂತಪದ್ಮನಾಭ ಉಪಾಧ್ಯಾಯ ಅವರ ತಂತ್ರಿವರ್ಯತ್ವದಲ್ಲಿ, ಪ್ರಧಾನ ಅರ್ಚಕ ಸೋಮನಾಥ ಮಯ್ಯ ಅವರ ಉಪಸ್ಥಿತಿಯಲ್ಲಿ ಬೆಳಿಗ್ಗೆ ಮಹಾಗಣಪತಿಗೆ 12 ತೆಂಗಿನಕಾಯಿ ಗಣಹವನ, 25 ಕಲಶಾಭಿಷೇಕ, ಹವನ, ಪ್ರಸನ್ನ ಪೂಜೆ, ಅಪ್ಪ, ಪಂಚಕಜ್ಜಾಯ, ಮಹಾಮಂಗಳಾರತಿ ಸೇವೆಗಳು ನಡೆದವು. ಮಧ್ಯಾಹ್ನ ಭೋಜನ ಪ್ರಸಾದವನ್ನು ನೂರಾರು ಭಕ್ತರು ಸ್ವೀಕರಿಸಿದರು.

ಸಂಜೆ ಶ್ರೀರಂಗ ಪೂಜೆಯು ಸಂಪನ್ನಗೊಂಡಿತು. ಬಳಿಕ ದೇವರ ಬಲಿ ಉತ್ಸವ ಚೆಂಡೆ, ವಾದ್ಯ, ಕೊಂಬು ಇತ್ಯಾದಿ ವಾದನಗಳೊಂದಿಗೆ ನೆರವೇರಿತು. ಉತ್ಸವದ ಸಂದರ್ಭ ಸಾವಿರಾರು ಭಕ್ತ ಬಂಧುಗಳು ಪಾಲ್ಗೊಂಡಿದ್ದರು.
ಸನಿಹದ ಶ್ರೀ ಸೋಮನಾಥೇಶ್ವರೀ ದೇವಿಗೆ ಜನವರಿಯಲ್ಲಿ ನಡೆದ ಬ್ರಹ್ಮಕಲಶೋತ್ಸವದ ಸಂದರ್ಭ ಧರ್ಮಸ್ಥಳ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರು ಶ್ರೀ ಮಹಾಗಣಪತಿ ದೇವಸ್ಥಾನ ಅಭಿವೃದ್ಧಿ ಹೊಂದಿದ ಕುರಿತು ಪ್ರಶಂಸೆ ವ್ಯಕ್ತಪಡಿಸಿದ್ದರು. ಎರಡು ವರ್ಷಗಳ ಹಿಂದೆ ಅವರ ಇಚ್ಛೆಯಂತೆ ಗಣಪತಿ ದೇವರ ಆಕರ್ಷಕ ನೂತನ ಮೂರ್ತಿಯನ್ನು ಸಿದ್ಧಪಡಿಸಿ ಪ್ರತಿಷ್ಠಾಪಿಸಲಾಗಿತ್ತು.


ಅರ್ಚಕ ಪ್ರವೀಣ ಮಯ್ಯ, ಪ್ರಕಾಶ ಹೊಳ್ಳ ಧಾರ್ಮಿಕ ವಿಧಾನಗಳನ್ನು ನೆರವೇರಿಸಿದರು. ಆಡಳಿತಾಧಿಕಾರಿ ಅಳದಂಗಡಿಯ ಪಶುವೈದ್ಯ ಪರಿವೀಕ್ಷಕ ರಮೇಶ್ ಉಪಸ್ಥಿತರಿದ್ದರು.

Related posts

ಬಾರ್ಯ ಮಂಡಲದ ಹಿಂದೂ ಸಂಗಮ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ಮಿತ್ತಬಾಗಿಲು:ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ಎಸ್.ಕೆ.ಪಿ.ಎ ಬೆಳ್ತಂಗಡಿ ವಲಯದ ವತಿಯಿಂದ ನಿವೃತ್ತ ಯೋಧ ಅಶೋಕ ಕುಮಾರ್ ಅವರಿಗೆ ಗೌರವ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಜೇಸಿಂತಾ ಮೋನಿಸ್ ನಿಧನ

Suddi Udaya

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

Suddi Udaya

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya
error: Content is protected !!