22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

ಅಳದಂಗಡಿ : ಗಣಪತಿ ಸಾನಿಧ್ಯವುಳ್ಳ ಕಾರಣಿಕ ಕ್ಷೇತ್ರವಾಗಿರುವ ತಾಲೂಕಿನ ಎರಡನೇ ದೇವಸ್ಥಾನವಾದ ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಎರಡನೇ ವರ್ಷದ ಪ್ರತಿಷ್ಠಾ ವರ್ಧಂತಿ ಫೆ. 7 ರಂದು ವಿಜೃಂಭಣೆಯಿದ ನೆರವೇರಿತು.


ಪೊಳಲಿ ಕೋಡಿಮಜಲು ಅನಂತಪದ್ಮನಾಭ ಉಪಾಧ್ಯಾಯ ಅವರ ತಂತ್ರಿವರ್ಯತ್ವದಲ್ಲಿ, ಪ್ರಧಾನ ಅರ್ಚಕ ಸೋಮನಾಥ ಮಯ್ಯ ಅವರ ಉಪಸ್ಥಿತಿಯಲ್ಲಿ ಬೆಳಿಗ್ಗೆ ಮಹಾಗಣಪತಿಗೆ 12 ತೆಂಗಿನಕಾಯಿ ಗಣಹವನ, 25 ಕಲಶಾಭಿಷೇಕ, ಹವನ, ಪ್ರಸನ್ನ ಪೂಜೆ, ಅಪ್ಪ, ಪಂಚಕಜ್ಜಾಯ, ಮಹಾಮಂಗಳಾರತಿ ಸೇವೆಗಳು ನಡೆದವು. ಮಧ್ಯಾಹ್ನ ಭೋಜನ ಪ್ರಸಾದವನ್ನು ನೂರಾರು ಭಕ್ತರು ಸ್ವೀಕರಿಸಿದರು.

ಸಂಜೆ ಶ್ರೀರಂಗ ಪೂಜೆಯು ಸಂಪನ್ನಗೊಂಡಿತು. ಬಳಿಕ ದೇವರ ಬಲಿ ಉತ್ಸವ ಚೆಂಡೆ, ವಾದ್ಯ, ಕೊಂಬು ಇತ್ಯಾದಿ ವಾದನಗಳೊಂದಿಗೆ ನೆರವೇರಿತು. ಉತ್ಸವದ ಸಂದರ್ಭ ಸಾವಿರಾರು ಭಕ್ತ ಬಂಧುಗಳು ಪಾಲ್ಗೊಂಡಿದ್ದರು.
ಸನಿಹದ ಶ್ರೀ ಸೋಮನಾಥೇಶ್ವರೀ ದೇವಿಗೆ ಜನವರಿಯಲ್ಲಿ ನಡೆದ ಬ್ರಹ್ಮಕಲಶೋತ್ಸವದ ಸಂದರ್ಭ ಧರ್ಮಸ್ಥಳ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರು ಶ್ರೀ ಮಹಾಗಣಪತಿ ದೇವಸ್ಥಾನ ಅಭಿವೃದ್ಧಿ ಹೊಂದಿದ ಕುರಿತು ಪ್ರಶಂಸೆ ವ್ಯಕ್ತಪಡಿಸಿದ್ದರು. ಎರಡು ವರ್ಷಗಳ ಹಿಂದೆ ಅವರ ಇಚ್ಛೆಯಂತೆ ಗಣಪತಿ ದೇವರ ಆಕರ್ಷಕ ನೂತನ ಮೂರ್ತಿಯನ್ನು ಸಿದ್ಧಪಡಿಸಿ ಪ್ರತಿಷ್ಠಾಪಿಸಲಾಗಿತ್ತು.


ಅರ್ಚಕ ಪ್ರವೀಣ ಮಯ್ಯ, ಪ್ರಕಾಶ ಹೊಳ್ಳ ಧಾರ್ಮಿಕ ವಿಧಾನಗಳನ್ನು ನೆರವೇರಿಸಿದರು. ಆಡಳಿತಾಧಿಕಾರಿ ಅಳದಂಗಡಿಯ ಪಶುವೈದ್ಯ ಪರಿವೀಕ್ಷಕ ರಮೇಶ್ ಉಪಸ್ಥಿತರಿದ್ದರು.

Related posts

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಧರ್ಮಸ್ಥಳದ ಅರಣ್ಯದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಉಜಿರೆ ಪಂಚಾಯತ್‌ನ ಎಂಆರ್‌ಎಫ್ ಘಟಕಕ್ಕೆ ಭೇಟಿ

Suddi Udaya

ಉಜಿರೆ : ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವಾರ್ಷಿಕ ಕಾರ್ಯಚುಟುವಟಿಕೆಗಳ ಸಮಾರೋಪ

Suddi Udaya

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya
error: Content is protected !!