22.5 C
ಪುತ್ತೂರು, ಬೆಳ್ತಂಗಡಿ
February 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

ಬೆಳ್ತಂಗಡಿ: ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳು ಅಥವಾ ಇತರ ಸಿಬ್ಬಂದಿಗಳು ಇರುವುದು ಸಾಮಾನ್ಯ ಆದರೆ ಇಂದಬೆಟ್ಟು ಪ್ರಾಥಮಿಕ ಆಸ್ಪತ್ರೆಯಲ್ಲಿ ಫೆ.8ರಂದು ಸಂಜೆ 5.30ರಿಂದ ಯಾರೂ ಇಲ್ಲದೆ, ಬಾಗಿಲನ್ನು ಹಾಕದೆ ಸಿಬ್ಬಂದಿಗಳು ಹೋಗಿರುವುದು ಕಂಡು ಬಂದಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 7 ಗಂಟೆ ತನಕ ಆಸ್ಪತ್ರೆಗಳು ಓಪನ್ ಆಗಿರುತ್ತದೆ. ಅಗತ್ಯವಿದ್ದವರು ಜೌಷಧಿಗಾಗಿ ಬರುತ್ತಿರುತ್ತಾರೆ. ನಂತರ ಹೆಚ್ಚಿನ ಕಡೆ ಬಾಗಿಲು ಹಾಕಿ ಸಿಬ್ಬಂದಿಗಳು ತೆರಳುತ್ತಾರೆ. ಆದರೆ ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಂದು ಸಂಜೆ 5.30ಕ್ಕೆ ಸ್ಥಳೀಯರು ಹೋಗಿದ್ದು, ಅವರಿಗೆ ಅಚ್ಚರಿ ಕಾದಿತ್ತು. ಆಸ್ಪತ್ರೆ ಓಪನ್ ಆಗಿತ್ತು. ಆದರೆ ಒಳಗೆ ಯಾರೂ ಇರಲಿಲ್ಲ. ವೈದ್ಯರು, ನರ್ಸ್‌ಗಳು, ಸಿಬ್ಬಂದಿಗಳು ಯಾರು ಇಲ್ಲದೆ ಸ್ಥಳೀಯರು ಸಂಬಂಧ ಪಟ್ಟವರಿಗೆ ಮಾಹಿತಿ ನೀಡಲು ಮೊಬೈಲ್ ಕರೆ ಮಾಡಿದರೂ ಅವರು ಸ್ವೀಕರಿಸಲಿಲ್ಲ. ಆಸ್ಪತ್ರೆಗೆ ಬಾಗಿಲನ್ನು ಹಾಕದೆ ಹೋಗಿರುವುದು ಸ್ಥಳೀಯರಿಗೆ ಆಶ್ಚರ್ಯವನ್ನು ತಂದಿದೆ.

Related posts

ಗುರಿಪಳ್ಳ ಜಯನಗರದಲ್ಲಿ ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸ್ವ ಸಹಾಯ ಸಂಘ ಉದ್ಘಾಟನೆ

Suddi Udaya

ಉಜಿರೆ: ಎಸ್. ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ನೀರಚಿಲುಮೆ ಬಸ್ ಸ್ಟ್ಯಾಂಡಿನ ಬಳಿ ಹೆದ್ದಾರಿ ಬದಿಯಲ್ಲಿ ಕುಸಿದ ರಸ್ತೆ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಸಂಬಂಧಿಸಿದ ಕಡಿರ ನಾಗಬನದಲ್ಲಿ ನೂತನ ನಾಗನಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

Suddi Udaya
error: Content is protected !!