23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

ಬೆಳ್ತಂಗಡಿ: ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳು ಅಥವಾ ಇತರ ಸಿಬ್ಬಂದಿಗಳು ಇರುವುದು ಸಾಮಾನ್ಯ ಆದರೆ ಇಂದಬೆಟ್ಟು ಪ್ರಾಥಮಿಕ ಆಸ್ಪತ್ರೆಯಲ್ಲಿ ಫೆ.8ರಂದು ಸಂಜೆ 5.30ರಿಂದ ಯಾರೂ ಇಲ್ಲದೆ, ಬಾಗಿಲನ್ನು ಹಾಕದೆ ಸಿಬ್ಬಂದಿಗಳು ಹೋಗಿರುವುದು ಕಂಡು ಬಂದಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 7 ಗಂಟೆ ತನಕ ಆಸ್ಪತ್ರೆಗಳು ಓಪನ್ ಆಗಿರುತ್ತದೆ. ಅಗತ್ಯವಿದ್ದವರು ಜೌಷಧಿಗಾಗಿ ಬರುತ್ತಿರುತ್ತಾರೆ. ನಂತರ ಹೆಚ್ಚಿನ ಕಡೆ ಬಾಗಿಲು ಹಾಕಿ ಸಿಬ್ಬಂದಿಗಳು ತೆರಳುತ್ತಾರೆ. ಆದರೆ ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಂದು ಸಂಜೆ 5.30ಕ್ಕೆ ಸ್ಥಳೀಯರು ಹೋಗಿದ್ದು, ಅವರಿಗೆ ಅಚ್ಚರಿ ಕಾದಿತ್ತು. ಆಸ್ಪತ್ರೆ ಓಪನ್ ಆಗಿತ್ತು. ಆದರೆ ಒಳಗೆ ಯಾರೂ ಇರಲಿಲ್ಲ. ವೈದ್ಯರು, ನರ್ಸ್‌ಗಳು, ಸಿಬ್ಬಂದಿಗಳು ಯಾರು ಇಲ್ಲದೆ ಸ್ಥಳೀಯರು ಸಂಬಂಧ ಪಟ್ಟವರಿಗೆ ಮಾಹಿತಿ ನೀಡಲು ಮೊಬೈಲ್ ಕರೆ ಮಾಡಿದರೂ ಅವರು ಸ್ವೀಕರಿಸಲಿಲ್ಲ. ಆಸ್ಪತ್ರೆಗೆ ಬಾಗಿಲನ್ನು ಹಾಕದೆ ಹೋಗಿರುವುದು ಸ್ಥಳೀಯರಿಗೆ ಆಶ್ಚರ್ಯವನ್ನು ತಂದಿದೆ.

Related posts

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

Suddi Udaya

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya

ಶಿಶಿಲ: ಕಂಚಿನಡ್ಕ ನಿವಾಸಿ ಸುಂದರಿ ನಿಧನ

Suddi Udaya

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya
error: Content is protected !!