ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

ಬೆಳ್ತಂಗಡಿ: ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳು ಅಥವಾ ಇತರ ಸಿಬ್ಬಂದಿಗಳು ಇರುವುದು ಸಾಮಾನ್ಯ ಆದರೆ ಇಂದಬೆಟ್ಟು ಪ್ರಾಥಮಿಕ ಆಸ್ಪತ್ರೆಯಲ್ಲಿ ಫೆ.8ರಂದು ಸಂಜೆ 5.30ರಿಂದ ಯಾರೂ ಇಲ್ಲದೆ, ಬಾಗಿಲನ್ನು ಹಾಕದೆ ಸಿಬ್ಬಂದಿಗಳು ಹೋಗಿರುವುದು ಕಂಡು ಬಂದಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 7 ಗಂಟೆ ತನಕ ಆಸ್ಪತ್ರೆಗಳು ಓಪನ್ ಆಗಿರುತ್ತದೆ. ಅಗತ್ಯವಿದ್ದವರು ಜೌಷಧಿಗಾಗಿ ಬರುತ್ತಿರುತ್ತಾರೆ. ನಂತರ ಹೆಚ್ಚಿನ ಕಡೆ ಬಾಗಿಲು ಹಾಕಿ ಸಿಬ್ಬಂದಿಗಳು ತೆರಳುತ್ತಾರೆ. ಆದರೆ ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಂದು ಸಂಜೆ 5.30ಕ್ಕೆ ಸ್ಥಳೀಯರು ಹೋಗಿದ್ದು, ಅವರಿಗೆ ಅಚ್ಚರಿ ಕಾದಿತ್ತು. ಆಸ್ಪತ್ರೆ ಓಪನ್ ಆಗಿತ್ತು. ಆದರೆ ಒಳಗೆ ಯಾರೂ ಇರಲಿಲ್ಲ. ವೈದ್ಯರು, ನರ್ಸ್‌ಗಳು, ಸಿಬ್ಬಂದಿಗಳು ಯಾರು ಇಲ್ಲದೆ ಸ್ಥಳೀಯರು ಸಂಬಂಧ ಪಟ್ಟವರಿಗೆ ಮಾಹಿತಿ ನೀಡಲು ಮೊಬೈಲ್ ಕರೆ ಮಾಡಿದರೂ ಅವರು ಸ್ವೀಕರಿಸಲಿಲ್ಲ. ಆಸ್ಪತ್ರೆಗೆ ಬಾಗಿಲನ್ನು ಹಾಕದೆ ಹೋಗಿರುವುದು ಸ್ಥಳೀಯರಿಗೆ ಆಶ್ಚರ್ಯವನ್ನು ತಂದಿದೆ.

Related posts

ಪಡಂಗಡಿ ರಸ್ತೆಯ ಗುಂಡಿಗಳನ್ನು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ದುರಸ್ಥಿ

Suddi Udaya

ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಕಿಲ್ಲೂರಿನಲ್ಲಿ ಪ್ರತಿಷ್ಠಾಪನೆ: ಜ.11-12: ಮಿತ್ತಬಾಗಿಲು-ಮಲವಂತಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗುರು ಭವನ ಉದ್ಘಾಟನೆ

Suddi Udaya

ಮುಂಡ್ರುಪ್ಪಾಡಿ ಸ. ಕಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ “ಸಾಧನಾ ಪ್ರಶಸ್ತಿ”

Suddi Udaya

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

Suddi Udaya

ಬೆಳ್ತಂಗಡಿ ತಾಲೂಕಿನ ಯುವಕರು ಮಹಿಳೆಯರಿಗೆ ನೇರ ಅವಕಾಶ

Suddi Udaya
error: Content is protected !!