July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

ಬೆಳ್ತಂಗಡಿ: ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳು ಅಥವಾ ಇತರ ಸಿಬ್ಬಂದಿಗಳು ಇರುವುದು ಸಾಮಾನ್ಯ ಆದರೆ ಇಂದಬೆಟ್ಟು ಪ್ರಾಥಮಿಕ ಆಸ್ಪತ್ರೆಯಲ್ಲಿ ಫೆ.8ರಂದು ಸಂಜೆ 5.30ರಿಂದ ಯಾರೂ ಇಲ್ಲದೆ, ಬಾಗಿಲನ್ನು ಹಾಕದೆ ಸಿಬ್ಬಂದಿಗಳು ಹೋಗಿರುವುದು ಕಂಡು ಬಂದಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 7 ಗಂಟೆ ತನಕ ಆಸ್ಪತ್ರೆಗಳು ಓಪನ್ ಆಗಿರುತ್ತದೆ. ಅಗತ್ಯವಿದ್ದವರು ಜೌಷಧಿಗಾಗಿ ಬರುತ್ತಿರುತ್ತಾರೆ. ನಂತರ ಹೆಚ್ಚಿನ ಕಡೆ ಬಾಗಿಲು ಹಾಕಿ ಸಿಬ್ಬಂದಿಗಳು ತೆರಳುತ್ತಾರೆ. ಆದರೆ ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಂದು ಸಂಜೆ 5.30ಕ್ಕೆ ಸ್ಥಳೀಯರು ಹೋಗಿದ್ದು, ಅವರಿಗೆ ಅಚ್ಚರಿ ಕಾದಿತ್ತು. ಆಸ್ಪತ್ರೆ ಓಪನ್ ಆಗಿತ್ತು. ಆದರೆ ಒಳಗೆ ಯಾರೂ ಇರಲಿಲ್ಲ. ವೈದ್ಯರು, ನರ್ಸ್‌ಗಳು, ಸಿಬ್ಬಂದಿಗಳು ಯಾರು ಇಲ್ಲದೆ ಸ್ಥಳೀಯರು ಸಂಬಂಧ ಪಟ್ಟವರಿಗೆ ಮಾಹಿತಿ ನೀಡಲು ಮೊಬೈಲ್ ಕರೆ ಮಾಡಿದರೂ ಅವರು ಸ್ವೀಕರಿಸಲಿಲ್ಲ. ಆಸ್ಪತ್ರೆಗೆ ಬಾಗಿಲನ್ನು ಹಾಕದೆ ಹೋಗಿರುವುದು ಸ್ಥಳೀಯರಿಗೆ ಆಶ್ಚರ್ಯವನ್ನು ತಂದಿದೆ.

Related posts

ಬೆಳಾಲು ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

Suddi Udaya

ರಾಷ್ಟ್ರಮಟ್ಟದ ಕರಾಟೆ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ್ ಆಚಾರ್ಯ ನೇಮಕ

Suddi Udaya

ಎಕ್ಸಲೆ೦ಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

Suddi Udaya

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

Suddi Udaya

ವಾಣಿ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya
error: Content is protected !!