July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಚೌಟ ಮನವಿ

ಮಂಗಳೂರು: ದಕ್ಷಿಣ ಕನ್ನಡದ ಅಡಿಕೆ ಕೃಷಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ‘ಸಂಸದ ಕ್ಯಾ। ಬ್ರಿಜೇಶ್ ಚೌಟರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ಹೊರ ದೇಶಗಳಿಂದ ತಪಾಸಣೆಗೆ ಒಳಗಾಗದೆ ಅಡಿಕೆ ಆಮದು ಆಗುತ್ತಿರುವ ಕಾರಣ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯ ಸಮ್ಮತವಲ್ಲದರ ಸಮರ ಎದುರಿಸುತ್ತಿದ್ದಾರೆ. ಇದರಿಂದ ಜಿಲ್ಲೆಯ ಅಡಿಕೆ ಕೃಷಿಕರು ಸೂಕ್ತ ಬೆಲೆ ದೊರೆಯದೆ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ, ನಿಯಂತ್ರಣವಿಲ್ಲದೆ ಆಮದಾಗುತ್ತಿರುವ ಅಡಿಕೆ ಉತ್ಪನ್ನಗಳ ಮೇಲೆ ನಿಗಾ ವಹಿಸುವ ಮೂಲಕ ಇಲ್ಲಿನ ಅಡಿಕೆಗೆ ಸೂಕ್ತ ಮಾರುಕಟ್ಟೆದರ ದೊರೆಯಲು ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಅಡಿಕೆ ಬೆಳೆಗೆ ಇತ್ತೀಚಿನ ವರ್ಷಗಳಲ್ಲಿ ಕೊಳೆರೋಗ ಹಾಗೂ ಎಲೆಚುಕ್ಕಿ ಸಮಸ್ಯೆ ಹೆಚ್ಚಾಗಿರುವುದರಿಂದ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಈ ಕಾರಣಕ್ಕೆ ಜಿಲ್ಲೆಯಲ್ಲಿ ಅಡಿಕೆಗೆ ಕಾಫಿಯನ್ನು ಪರ್ಯಾಯ ಬೆಳೆಯಾಗಿ ಬೆಳೆಸುವಲ್ಲಿ ರೈತರನ್ನು ಉತ್ತೇಜಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಸದರು ಸಚಿವರನ್ನು ಕೋರಿದ್ದಾರೆ. ಸಂಸದರ ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿದ್ದಾರೆ.

Related posts

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್‌‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿದ ವಕ್ಫ್ ಮಂಡಳಿ: ಸರಕಾರದಿಂದ ಆಡಳಿತಾಧಿಕಾರಿ ನೇಮಕ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಅವರಿಗೆ ಚಿನ್ನದ ಪದಕ

Suddi Udaya

2024-25 ನೇ ಸಾಲಿನ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿಕರಿಂದ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ

Suddi Udaya

ಬಳಂಜ: ವೇಣೂರು ಆರಕ್ಷಕ ಠಾಣೆಯ ವತಿಯಿಂದ ಬೀಟ್ ಪೋಲೀಸ್ ಪಂಪಾಪತಿಯವರಿಂದ ಸಾರ್ವಜನಿಕರಿಗೆ ಸೈಬರ್ ಕ್ರೈಂ ,ಸಂಚಾರ ನಿಯಮ ಪಾಲನೆ ಹಾಗೂ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಮಾಹಿತಿ

Suddi Udaya

ಮಚ್ಚಿನ: ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ಗೇರುಕಟ್ಟೆ: ಹಲೇಜಿ -ಕಲಾಯಿ ಸಂಪರ್ಕ ರಸ್ತೆಯ ಚೆಕ್ ಡ್ಯಾಮ್ ನಲ್ಲಿ ತುಂಬಿಕೊಂಡ ಮರದ ದಿಮ್ಮಿಗಳ ತೆರವು

Suddi Udaya
error: Content is protected !!